ಮೊಬೈಲ್ ಆಪ್ (ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ದೂರು ದಾಖಲಿಸಲು ಬಿಬಿಎಂಪಿ ಆಪ್ ಬಿಡುಗಡೆ

ತಮ್ಮ ದೂರು ದುಮ್ಮಾನಗಳನ್ನು ಪಾಲಿಕೆಗೆ ತಲುಪಿಸಲು ಪರದಾಡುತ್ತಿದ್ದ ನಾಗರಿಕರಿಗೆ ಸ್ಪಂದಿಸಲು ಬಿಬಿಎಂಪಿ ನೂತನ ಮೊಬೈಲ್ ಆಪ್ ಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ತಮ್ಮ ದೂರು ದುಮ್ಮಾನಗಳನ್ನು ಪಾಲಿಕೆಗೆ ತಲುಪಿಸಲು ಪರದಾಡುತ್ತಿದ್ದ ನಾಗರಿಕರಿಗೆ ಸ್ಪಂದಿಸಲು ಬಿಬಿಎಂಪಿ ನೂತನ ಮೊಬೈಲ್ ಆಪ್ ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಪಾಲಿಕೆ ವ್ಯಾಪ್ತಿಯ 20  ಇಲಾಖೆಗಳು ಅಧಿಕಾರಿಗಳಿಗೆ ಮೊಬೈಲ್ ನಿಂದಲೇ ದೂರು ಸಲ್ಲಿಸಬಹುದು.
ನೂತನ ಮೊಬೈಲ್ ಆಂಡ್ರಾಯ್ಡ್ ಅಪ್ಲಿಕೇಷನ್ ಗಳಾದ ಬಿಬಿಎಂಪಿ ಸಹಾಯ ಹಾಗೂ ಟ್ರೀ ಕಟಿಂಗ್ ಆಪ್ ಗಳಿಗೆ ಪಾಲಿಕೆ ಕಚೇರಿಯಲ್ಲಿ ಜ.22 ರಂದು ಚಾಲನೆ ನೀಡಿ ಮಾತನಾಡಿದ ಮೇಯರ್ ಬಿಎನ್ ಮಂಜುನಾಥರೆಡ್ಡಿ, ರಾಜ್ಯದಲ್ಲಿ ಮೊಬಲ ಬಾರಿ ಮಹಾನಗರ ಪಾಲಿಕೆಯಿಂದ ಆಪ್ ಬಿಡುಗಡೆ ಮಾಡಲಾಗುತ್ತಿದೆ. ಮೂಲ ಸೌಕರ್ಯ, ರಸ್ತೆ, ತ್ಯಾಜ್ಯ ನಿರ್ವಹಣೆ, ಕಟ್ಟಡ ಯೋಜನೆಗಳು, ಆಸ್ತಿ ತೆರಿಗೆ, ಆರೋಗ್ಯ, ಸಾರ್ವಜನಿಕ ಸುರಕ್ಷತೆ, ಕಲ್ಯಾಣ, ಪರಿಸರ, ಮರಗಳ ಕಟಾವು ಮತ್ತು ಅರಣ್ಯ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಆಪ್ ಮೂಲಕ ಸಲ್ಲಿಸಬಹುದು ಎಂದರು.
ಈ ಆಪ್ ಶುಕ್ರವಾರದಿಂದಲೇ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದು, ಗೂಗಲ್ ಪ್ಲೇ ಸ್ಟೋರ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಸುಲಭ ಹಾಗೂ ಬಳಕೆದಾರ ಸ್ನೇಹಿ ನಾಗರಿಕರ ಆಪ್ ಇದಾಗಿದೆ. ಇದರೊಂದಿಗೆ ದಿನದ 24 ಗಂಟೆ ಕಾಲ್ ಸೆಂಟರ್ ಕಾರ್ಯನಿರ್ವಹಿಸಲಿದ್ದು, ನಾಗರಿಕರು ಯಾವುದೇ ಸಮಯದಲ್ಲಿ ತಮ್ಮ ಅಹವಾಲು ಸಲ್ಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT