ಪ್ರೊ.ಸಿಎನ್ ಆರ್ ರಾವ್ 
ಜಿಲ್ಲಾ ಸುದ್ದಿ

ನಮಗೆ ಸಂಶೋಧನೆಗೂ ಸಮಯವಿಲ್ಲ: ವಿಜ್ಞಾನಿ ಸಿಎನ್ಆರ್ ರಾವ್

ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹಾ ಸಮಿತಿಯ ಮುಖ್ಯಸ್ಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಕ್ರಮ ಹ್ಯುಮಾನಿಟಿ ಫೌಂಡೇಷನ್ ವತಿಯಿಂದ ನಗರದ ಜವಹಾರ್ ಲಾಲ್ ನೆಹರು ವಿಜ್ಞಾನ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ಪರಿಕ್ರಮ ವಿಜ್ಞಾನ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚೀನಾದಂತಹ ದೇಶಗಳಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಮಧ್ಯರಾತ್ರಿವರೆಗೂ ಸಂಶೋಧನೆಯಲ್ಲಿ ತೊಡಗುವ ಯುವಕರಿದ್ದಾರೆ. ಭಾರತೀಯರು ನಡೆಸುವ ಸಂಶೋಧನೆಗಳಿಂದ ಅತ್ಯುತ್ತಮ ಫಲಿತಾಂಶ ದೊರೆಯುತ್ತಿದೆಯಾದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ವಿಜ್ಞಾನಿಗಳು ಬಡವರು: ವಿಜ್ಞಾನ ಶ್ರೀಮಂತರಿಗೆ ಸೀಮಿತ ಎನ್ನುವ ಅಂಶ ಸತ್ಯಕ್ಕೆ ದೂರವಾದದ್ದು, ವಿಶ್ವದಲ್ಲಿ ಅತ್ಯುನ್ನತ ಸ್ಥಾನಕ್ಕೇರಿರುವ ಎಲ್ಲಾ ವಿಜ್ಞಾನಿಗಳು ಅತ್ಯಂತ ಕಡು ಬಡತನದ ಕುಟುಂಬದಿಂದ ಬಂದಿರುವುದು ಇದಕ್ಕೆ ಸಾಕ್ಷಿ ಎಂದರು. ಲ್ಯಾಬ್ ಸಹಾಯಕರು ಮತ್ತು ಲೆಕ್ಕ ಶಾಸ್ತ್ರಗಳಲ್ಲಿ ಪದವಿ ಪಡೆದವರು ಇಂದು ಅತ್ಯಂತ ಉನ್ನತ ಮಟ್ಟದ ವಿಜ್ಞಾನಿಗಳಾಗಿರುವ ಉದಾಹರಣೆಗಳಿದ್ದು, ವಿದ್ಯಾರ್ಥಿಗಳು ಗಂಭೀರವಾಗಿ ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT