ಪ್ರೊ.ಸಿಎನ್ ಆರ್ ರಾವ್ 
ಜಿಲ್ಲಾ ಸುದ್ದಿ

ನಮಗೆ ಸಂಶೋಧನೆಗೂ ಸಮಯವಿಲ್ಲ: ವಿಜ್ಞಾನಿ ಸಿಎನ್ಆರ್ ರಾವ್

ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹಾ ಸಮಿತಿಯ ಮುಖ್ಯಸ್ಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಕ್ರಮ ಹ್ಯುಮಾನಿಟಿ ಫೌಂಡೇಷನ್ ವತಿಯಿಂದ ನಗರದ ಜವಹಾರ್ ಲಾಲ್ ನೆಹರು ವಿಜ್ಞಾನ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ಪರಿಕ್ರಮ ವಿಜ್ಞಾನ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚೀನಾದಂತಹ ದೇಶಗಳಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಮಧ್ಯರಾತ್ರಿವರೆಗೂ ಸಂಶೋಧನೆಯಲ್ಲಿ ತೊಡಗುವ ಯುವಕರಿದ್ದಾರೆ. ಭಾರತೀಯರು ನಡೆಸುವ ಸಂಶೋಧನೆಗಳಿಂದ ಅತ್ಯುತ್ತಮ ಫಲಿತಾಂಶ ದೊರೆಯುತ್ತಿದೆಯಾದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ವಿಜ್ಞಾನಿಗಳು ಬಡವರು: ವಿಜ್ಞಾನ ಶ್ರೀಮಂತರಿಗೆ ಸೀಮಿತ ಎನ್ನುವ ಅಂಶ ಸತ್ಯಕ್ಕೆ ದೂರವಾದದ್ದು, ವಿಶ್ವದಲ್ಲಿ ಅತ್ಯುನ್ನತ ಸ್ಥಾನಕ್ಕೇರಿರುವ ಎಲ್ಲಾ ವಿಜ್ಞಾನಿಗಳು ಅತ್ಯಂತ ಕಡು ಬಡತನದ ಕುಟುಂಬದಿಂದ ಬಂದಿರುವುದು ಇದಕ್ಕೆ ಸಾಕ್ಷಿ ಎಂದರು. ಲ್ಯಾಬ್ ಸಹಾಯಕರು ಮತ್ತು ಲೆಕ್ಕ ಶಾಸ್ತ್ರಗಳಲ್ಲಿ ಪದವಿ ಪಡೆದವರು ಇಂದು ಅತ್ಯಂತ ಉನ್ನತ ಮಟ್ಟದ ವಿಜ್ಞಾನಿಗಳಾಗಿರುವ ಉದಾಹರಣೆಗಳಿದ್ದು, ವಿದ್ಯಾರ್ಥಿಗಳು ಗಂಭೀರವಾಗಿ ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!