ಪ್ರೊ.ಸಿಎನ್ ಆರ್ ರಾವ್ 
ಜಿಲ್ಲಾ ಸುದ್ದಿ

ನಮಗೆ ಸಂಶೋಧನೆಗೂ ಸಮಯವಿಲ್ಲ: ವಿಜ್ಞಾನಿ ಸಿಎನ್ಆರ್ ರಾವ್

ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹಾ ಸಮಿತಿಯ ಮುಖ್ಯಸ್ಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಕ್ರಮ ಹ್ಯುಮಾನಿಟಿ ಫೌಂಡೇಷನ್ ವತಿಯಿಂದ ನಗರದ ಜವಹಾರ್ ಲಾಲ್ ನೆಹರು ವಿಜ್ಞಾನ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ಪರಿಕ್ರಮ ವಿಜ್ಞಾನ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚೀನಾದಂತಹ ದೇಶಗಳಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಮಧ್ಯರಾತ್ರಿವರೆಗೂ ಸಂಶೋಧನೆಯಲ್ಲಿ ತೊಡಗುವ ಯುವಕರಿದ್ದಾರೆ. ಭಾರತೀಯರು ನಡೆಸುವ ಸಂಶೋಧನೆಗಳಿಂದ ಅತ್ಯುತ್ತಮ ಫಲಿತಾಂಶ ದೊರೆಯುತ್ತಿದೆಯಾದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ವಿಜ್ಞಾನಿಗಳು ಬಡವರು: ವಿಜ್ಞಾನ ಶ್ರೀಮಂತರಿಗೆ ಸೀಮಿತ ಎನ್ನುವ ಅಂಶ ಸತ್ಯಕ್ಕೆ ದೂರವಾದದ್ದು, ವಿಶ್ವದಲ್ಲಿ ಅತ್ಯುನ್ನತ ಸ್ಥಾನಕ್ಕೇರಿರುವ ಎಲ್ಲಾ ವಿಜ್ಞಾನಿಗಳು ಅತ್ಯಂತ ಕಡು ಬಡತನದ ಕುಟುಂಬದಿಂದ ಬಂದಿರುವುದು ಇದಕ್ಕೆ ಸಾಕ್ಷಿ ಎಂದರು. ಲ್ಯಾಬ್ ಸಹಾಯಕರು ಮತ್ತು ಲೆಕ್ಕ ಶಾಸ್ತ್ರಗಳಲ್ಲಿ ಪದವಿ ಪಡೆದವರು ಇಂದು ಅತ್ಯಂತ ಉನ್ನತ ಮಟ್ಟದ ವಿಜ್ಞಾನಿಗಳಾಗಿರುವ ಉದಾಹರಣೆಗಳಿದ್ದು, ವಿದ್ಯಾರ್ಥಿಗಳು ಗಂಭೀರವಾಗಿ ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT