ಪ್ರೊ.ಸಿಎನ್ ಆರ್ ರಾವ್ 
ಜಿಲ್ಲಾ ಸುದ್ದಿ

ನಮಗೆ ಸಂಶೋಧನೆಗೂ ಸಮಯವಿಲ್ಲ: ವಿಜ್ಞಾನಿ ಸಿಎನ್ಆರ್ ರಾವ್

ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಭಾರತೀಯರು ಸಂಶೋಧನೆಗಾಗಿ ಹೆಚ್ಚಿನ ಸಮಯವನ್ನು ಕಳೆಯುವುದಕ್ಕೆ ಮುಂದಾಗುತ್ತಿಲ್ಲ ಎಂದು ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹಾ ಸಮಿತಿಯ ಮುಖ್ಯಸ್ಥ, ವಿಜ್ಞಾನಿ ಭಾರತ ರತ್ನ ಪ್ರೊ.ಸಿಎನ್ ಆರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಕ್ರಮ ಹ್ಯುಮಾನಿಟಿ ಫೌಂಡೇಷನ್ ವತಿಯಿಂದ ನಗರದ ಜವಹಾರ್ ಲಾಲ್ ನೆಹರು ವಿಜ್ಞಾನ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ಪರಿಕ್ರಮ ವಿಜ್ಞಾನ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚೀನಾದಂತಹ ದೇಶಗಳಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಮಧ್ಯರಾತ್ರಿವರೆಗೂ ಸಂಶೋಧನೆಯಲ್ಲಿ ತೊಡಗುವ ಯುವಕರಿದ್ದಾರೆ. ಭಾರತೀಯರು ನಡೆಸುವ ಸಂಶೋಧನೆಗಳಿಂದ ಅತ್ಯುತ್ತಮ ಫಲಿತಾಂಶ ದೊರೆಯುತ್ತಿದೆಯಾದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ವಿಜ್ಞಾನಿಗಳು ಬಡವರು: ವಿಜ್ಞಾನ ಶ್ರೀಮಂತರಿಗೆ ಸೀಮಿತ ಎನ್ನುವ ಅಂಶ ಸತ್ಯಕ್ಕೆ ದೂರವಾದದ್ದು, ವಿಶ್ವದಲ್ಲಿ ಅತ್ಯುನ್ನತ ಸ್ಥಾನಕ್ಕೇರಿರುವ ಎಲ್ಲಾ ವಿಜ್ಞಾನಿಗಳು ಅತ್ಯಂತ ಕಡು ಬಡತನದ ಕುಟುಂಬದಿಂದ ಬಂದಿರುವುದು ಇದಕ್ಕೆ ಸಾಕ್ಷಿ ಎಂದರು. ಲ್ಯಾಬ್ ಸಹಾಯಕರು ಮತ್ತು ಲೆಕ್ಕ ಶಾಸ್ತ್ರಗಳಲ್ಲಿ ಪದವಿ ಪಡೆದವರು ಇಂದು ಅತ್ಯಂತ ಉನ್ನತ ಮಟ್ಟದ ವಿಜ್ಞಾನಿಗಳಾಗಿರುವ ಉದಾಹರಣೆಗಳಿದ್ದು, ವಿದ್ಯಾರ್ಥಿಗಳು ಗಂಭೀರವಾಗಿ ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT