ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಗಣರಾಜ್ಯೋತ್ಸವ ಹಿನ್ನೆಲೆ: ಸನ್ನಡತೆ ಆಧಾರದ ಮೇಲೆ 375 ಖೈದಿಗಳ ಬಿಡುಗಡೆಗೆ ನಿರ್ಧಾರ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 375 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ...

ಬೆಂಗಳೂರು:  ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 375 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ವಿಧಾನಸೌಧದಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸದ್ಯದಲ್ಲಿಯೇ ರಾಜ್ಯಪಾಲರಿಗೆ ಶಿಫಾರಸು ಕಡತ ರವಾನೆಯಾಗಲಿದೆ. 14 ವರ್ಷಕ್ಕೂ ಮೇಲ್ಪಟ್ಟು ಸಜೆ ಅನುಭವಿಸಿದ ಮಾಫಿ ರಹಿತ 120 ಖೈದಿಗಳನ್ನು ಬಿಡುಗಡೆಗೆ ನಿರ್ಧರಿಸಲಾಗಿದೆ. ಇದರ ಜೊತೆಗೆ ಮಾಫಿ ಸಹಿತ 255 ಖೈದಿಗಳು ಸಹ ಬಿಡುಗಡೆಯಾಗಲಿದ್ದಾರೆ. ಇದರಲ್ಲಿ 11 ಮಂದಿ ಮಹಿಳೆಯರಿದ್ದಾರೆ.

ಬೆಂಗಳೂರಿನಲ್ಲಿ 90, ವಿಜಯಾಪುರದಲ್ಲಿ 38, ಬೆಳಗಾವಿಯಲ್ಲಿ 114, ಧಾರವಾಡ 10, ಮೈಸೂರು 42, ಕಲ್ಬುರ್ಗಿ 50, ಬಳ್ಳಾರಿ ಕಾರಾಗೃಹದಲ್ಲಿರುವ 23 ಖೈದಿಗಳು ಈ ಪಟ್ಟಿಯಲ್ಲಿ ಸೇರಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು , ಇದಕ್ಕೆ ರಾಜ್ಯಪಾಲರ ಅಂಕಿತ ದೊರೆಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT