ಅಪಘಾತ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪ್ರತ್ಯೇಕ ರಸ್ತೆ ಅಪಘಾತ: 8 ಮಂದಿ ಸಾವು

ಬೀದರ್ ನ ಹುಮನಾಬಾದ್ ಮತ್ತು ರಾಯಚೂರಿನ ಮಸ್ಕಿಯಲ್ಲಿ ಭಾನುವಾರ ಸಂಭವಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು...

ಹುಮನಾಬಾದ್/ಮಸ್ತಿ: ಬೀದರ್ ನ ಹುಮನಾಬಾದ್ ಮತ್ತು ರಾಯಚೂರಿನ ಮಸ್ಕಿಯಲ್ಲಿ ಭಾನುವಾರ ಸಂಭವಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಹುಮನಾಬಾದ್-ಕಲಬುರಗಿ ಮಾರ್ಗದ ಜಲಸಂಗಿ ಗ್ರಾಮದ ಬಳಿ ಮೈಲಾರ ಮಲ್ಲಣ್ಣನ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಎದುರಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 6 ಮಂದಿ ಸ್ಥಲದಲ್ಲೇ ಮೃತಪಟ್ಟಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದಾರೆ.

ಮೃತರು ಕಲಬುರಗಿ ಜಿಲ್ಲೆಯ ಚಿತ್ತಾಪುರ್ ತಾಲೂಕಿನ ಹೆಬ್ಬಾಳ ಗ್ರಾಮದವರಾಗಿದ್ದಾರೆ. ಕಲಬುರಗಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಮತ್ತೊಂದು ಘಟನೆಯಲ್ಲಿ ಮಸ್ಕಿ ಪಟ್ಟಣದ ರಾಜ್ಯ ಹೆದ್ದಾರಿಯ ಲಿಂಗಸ್ಗೂರು ರಸ್ತೆಯ ಸಿಂಗಸನಹಳ್ಳ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ವಿವಾಹಿತೆ ಬಲಿ?