ಕಾಗೋಡು ತಿಮ್ಮಪ್ಪ 
ಜಿಲ್ಲಾ ಸುದ್ದಿ

ಎಲ್ಲಾ ದಾಖಲೆಗಳ ಸಂಗ್ರಹ, ಸಿಜೆ ಅವರಿಗೆ ಸದ್ಯದಲ್ಲೆ ಸಲ್ಲಿಕೆ

ಉಪ ಲೋಕಾಯುಕ್ತ ಸುಭಾಷ್‌ ಬಿ.ಅಡಿ ಅವರ ಪದಚ್ಯುತಿ ಪ್ರಸ್ತಾವನೆಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡಲು ವಿಳಂಬವಾಗಿದ್ದು, ಇನ್ನೊಂದು...

ಬೆಂಗಳೂರು: ಉಪ ಲೋಕಾಯುಕ್ತ ಸುಭಾಷ್‌ ಬಿ.ಅಡಿ ಅವರ ಪದಚ್ಯುತಿ ಪ್ರಸ್ತಾವನೆಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡಲು ವಿಳಂಬವಾಗಿದ್ದು, ಇನ್ನೊಂದು ವಾರದಲ್ಲಿ ಈ ಕುರಿತ ಪ್ರಸ್ತಾವನೆ ಕಳುಹಿಸಿಕೊಡುವೆ' ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಲೋಕಾಯುಕ್ತ ನ್ಯಾ. ಸುಭಾಷ್‌ ಅಡಿ ಅವರ ವಿರುದ್ಧ ಮಂಡಿಸಿರುವ ಹಕ್ಕುಚ್ಯುತಿ ಪ್ರಸ್ತಾವನೆಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಅದನ್ನು ಅಂಗೀಕರಿಸಿದ್ದೇನೆ. ಆದರೆ, ಅನಾರೋಗ್ಯದ ಕಾರಣದಿಂದಾಗಿ ಅದನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಲು ವಿಳಂಬವಾಯಿತು ಎಂದರು.

ಈ ವಿಚಾರದಲ್ಲಿ ತಮ್ಮ ವಿರುದ್ಧ ಕೆಲವರು ಪ್ರತಿಕ್ರಿಯಿಸಿರುವ ಬಗ್ಗೆ ಕಿಡಿ ಕಾರಿದ ತಿಮ್ಮಪ್ಪ, 'ಇಂತಹ ಗಂಭೀರ ವಿಚಾರಗಳಲ್ಲಿ ಹುಡುಗಾಟಿಕೆ ಮಾಡಲು ನಾನೇನೂ ಹುಡುಗನಲ್ಲ. ಯಾರದ್ದೊ ಒತ್ತಡಕ್ಕೆ ಮಣಿಯುತ್ತೇನೆ ಎನ್ನಲು ನಾನು ಯಾರ ಮಾತನ್ನೂ ಕೇಳುವವನಲ್ಲ. ನ್ಯಾ. ಅಡಿ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸರಿ ಇವೆ ಎಂಬುದು ನನಗೆ ಅನಿಸಿದರೆ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿಕೊಡುತ್ತೇನೆ' ಎಂದು ಸ್ಪಷ್ಟಪಡಿಸಿದರು.

ಲೋಕಾಯುಕ್ತರ ಆಯ್ಕೆ ಕುರಿತ ಸಭೆ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಭೆ ರದ್ದಾಗಿರುವುದು ನನಗೆ ಗೊತ್ತಿಲ್ಲ ಎಂದು ಕಾಗೋಡು ತಿಮ್ಮಪಪ್ಪ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT