ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಬತ್ತ ಕಟಾವು ಯಂತ್ರಕ್ಕೆ ಸಿಲುಕಿ ರೈತ ಸಾವು

ಜಮೀನಿನ ಬದುವಿನ ಮೇಲೆ ಕುಳಿತಿದ್ದ ರೈತನೊಬ್ಬನ ಮೇಲೆ ಕಟಾವು ಯಂತ್ರ ಹರಿದು ಸಾವನ್ನಪ್ಪಿದ ಧಾರುಣ ಘಟನೆ ಕೊಳ್ಳೆಗಾಲದಲ್ಲಿ ಸೋಮವಾರ ನಡೆದಿದೆ....

ಕೊಳ್ಳೆಗಾಲ: ಜಮೀನಿನ ಬದುವಿನ ಮೇಲೆ ಕುಳಿತಿದ್ದ ರೈತನೊಬ್ಬನ ಮೇಲೆ ಕಟಾವು ಯಂತ್ರ ಹರಿದು ಸಾವನ್ನಪ್ಪಿದ ಧಾರುಣ ಘಟನೆ ಕೊಳ್ಳೆಗಾಲದಲ್ಲಿ ಸೋಮವಾರ ನಡೆದಿದೆ.

ಬತ್ತ ಕಟಾವು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ರೈತನನ್ನು 62 ವರ್ಷದ ಮಲ್ಲಪ್ಪ ಎಂದು ಗುರುತಿಸಲಾಗಿದೆ. ರೈತ ಮಲ್ಲಪ್ಪ ಜಮೀನಿನ ಬದುವಿನಲ್ಲಿ ಕುಳಿತಿದ್ದ, ಈ ವೇಳೆ ಬತ್ತ ಕಟಾವು ಮಾಡುತ್ತಿದ್ದ ಒಕ್ಕಣೆ ಯಂತ್ರ ಅಕಸ್ಮಾತಾಗಿ ಆತನ ಮೇಲೆ ಹರಿದಿದ್ದು, ರೈತ ಮಲ್ಲಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಟಾವು ಯಂತ್ರ ಪಕ್ಕಕ್ಕೆ ಸರಿಯುತ್ತಿದ್ದಂತೆಯೇ ಮಲಪ್ಪನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತಾದರೂ ಅಷ್ಟರಲ್ಲಾಗಲೇ ಆತನ ಪ್ರಾಣ ಪಕ್ಷಿ ಹಾರಿತ್ತು.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT