ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪೊಲೀಸರ ವಿಳಂಬದಿಂದಾಗಿ ಲಾಟರಿ ಕಿಂಗ್ ಪಿನ್ ಗೆ ಸಿಕ್ತು ಜಾಮೀನು..!

ಒಂದಂಕಿ ಲಾಟರಿ ಹಗರಣದ ಪ್ರಮುಖ ರೂವಾರಿಯಾಗಿರುವ ಹಗರಣದ ಕಿಂಗ್ ಪಿನ್ ಪಾರಿ ರಾಜನ್ ಕೊನೆಗೂ ಜಾಮೀನು ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾನೆ...

ಬೆಂಗಳೂರು: ಒಂದಂಕಿ ಲಾಟರಿ ಹಗರಣದ ಪ್ರಮುಖ ರೂವಾರಿಯಾಗಿರುವ ಹಗರಣದ ಕಿಂಗ್ ಪಿನ್ ಪಾರಿ ರಾಜನ್ ಕೊನೆಗೂ ಜಾಮೀನು ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾನೆ.

ರಾಜ್ಯ ರಾಜಕಾರಣ ಹಾಗೂ ಪೊಲೀಸ್ ಇಲಾಖೆಯಲ್ಲಿ ತಲ್ಲಣ ಮೂಡಿಸಿದ್ದ ಒಂದಂಕಿ ಲಾಟರಿ ಹಗರಣ ಕಿಂಗ್‌ಪಿನ್ ಪಾರಿ ರಾಜನ್ ಗೆ ಜಾಮೀನು ದೊರೆತಿದೆ. 9 ತಿಂಗಳು ಕಳೆದರೂ  ಪೊಲೀಸರಿಂದ ಆರೋಪಪಟ್ಟಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ನೀಡಿದೆ.  ಅಕ್ರಮ ಲಾಟರಿ ದಂಧೆ ಆರೋಪದಲ್ಲಿ 2015ರ  ಏಪ್ರಿಲ್ 30ರಂದು ಕೆಜಿಎಫ್ ನಲ್ಲಿ ಸಿಐಡಿ ಅಧಿಕಾರಿಗಳು ರಾಜನ್‌ನನ್ನು ಬಂಧಿಸಿದ್ದರು. ರಾಜನ್ ಜತೆಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್‌ರನ್ನು  ಅಮಾನತುಗೊಳಿಸಲಾಗಿತ್ತು.

ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಮೇ 27ರಂದು ರಾಜ್ಯ ಸರ್ಕಾರ ಲಾಟರಿ ದಂಧೆ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿತ್ತು. ಎರಡೂವರೆ ತಿಂಗಳ ನಂತರ ಸಿಬಿಐ ತನಿಖೆ ನಡೆಸಲು ಹಸಿರು  ನಿಶಾನೆ ತೋರಿ ಎಫ್ ಐಆರ್ ದಾಖಲಿಸಿಕೊಂಡಿತ್ತು. ಆದರೆ, ಬಂಧನವಾಗಿ 9 ತಿಂಗಳು ಕಳೆದರೂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿರಲಿಲ್ಲ. ಇದೇ ಕಾರಣವನ್ನು ಮುಂದಿಟ್ಟುಕೊಟ್ಟುಕೊಂಡು  ರಾಜನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯ ಸೋಮವಾರ ಅರ್ಜಿ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT