ವಿ.ಆರ್ ವಾಲಾ 
ಜಿಲ್ಲಾ ಸುದ್ದಿ

ಯಥಾ ಪ್ರಜಾ ತಥಾ ರಾಜ ಪರಿಸ್ಥಿತಿ ಇಂದಿನದ್ದು: ವಾಲಾ

ಈ ಹಿಂದೆ ಯಥಾ ರಾಜ ತಥಾ ಪ್ರಜಾ ಎಂಬ ಸ್ಥಿತಿಯಿತ್ತು. ಆದರೆ ಇಂದು ಯಥಾ ಪ್ರಜಾ ತಥಾ ರಜಾ , ಎಂಬ ಸ್ಥಿತಿಯಿದ್ದು, ಪ್ರಜೆಗಳು ಹೇಗಿರುತ್ತಾರೋ ಪ್ರಜಾನಾಯಕ...

ಬೆಂಗಳೂರು: ಈ ಹಿಂದೆ ಯಥಾ ರಾಜ ತಥಾ ಪ್ರಜಾ ಎಂಬ ಸ್ಥಿತಿಯಿತ್ತು. ಆದರೆ ಇಂದು ಯಥಾ ಪ್ರಜಾ ತಥಾ ರಜಾ , ಎಂಬ ಸ್ಥಿತಿಯಿದ್ದು, ಪ್ರಜೆಗಳು ಹೇಗಿರುತ್ತಾರೋ ಪ್ರಜಾನಾಯಕ ಅದೇ ರೀತಿ ಇರುತ್ತಾನೆ. ಹೀಗಾಗಿ ಯುವಕರು ಜವಾಬ್ದಾರಿಯುತವಾಗಿ ಮತ ಚಲಾವಣೆ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕು. ದೇಶದಲ್ಲಿ ಚುನಾವಣಾ ಆಯೋಗ ಸ್ಥಾಪನೆಯಾಗಿ 66 ವರ್ಷ ಕಳೆದರೂ ಇದುವರೆಗೂ ಒಮ್ಮೆಯೂ ದೇಶದಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗಿಲ್ಲ. ಎಂದು ರಾಜ್ಯ ಪಾಲ ವಿ.ಆರ್ ವಾಲಾ ಬೇಸರ ವ್ಯಕ್ತ ಪಡಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗ ಸೋಮವಾರ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಬೇಕಾದರೇ ದೇಶದ ಪ್ರತಿಯೊಬ್ಬ ನಾಗರಿಕನೂ ಮತ ಚಲಾಯಿಸಬೇಕು.

ಈ ವರೆಗೆ ದೇಶದಲ್ಲಿ ಶೇ. 70 ರಿಂದ 75 ರವರೆಗೆ ಮಾತ್ರ ಮತದಾನವಾಗಿದ್ದು, ಉಳಿದ ಶೇ, 25 ರಷ್ಟು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದರು.

ದೇಶದ ಪ್ರಗತಿ ಯುವಕರ ಕೈಯ್ಯಲ್ಲಿದ್ದು ಸೂಕ್ತ ವ್ಯಕ್ತಿಗೆ ಮತದಾನ ಮಾಡುವ ಮೂಲಕ ದೇಶವನ್ನು ಅಭಿವೃದ್ದಿ ಪಥದಲ್ಲಿ ತೆಗೆದುಕೊಂಡೊಯ್ಯಬೇಕು. ಚುನಾವಣೆ ದಿನ ಎಲ್ಲಿದ್ದರೂ ತಮ್ಮ ಕ್ಷೇತ್ರಕ್ಕೆ ಹೋಗಿ ಮತದಾನ ಮಾಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT