ಜಿಲ್ಲಾ ಸುದ್ದಿ

ಶಿಂಷಾನದಿಗೆ ಉರುಳಿದ ಕೆಎಸ್ಆರ್ಟಿಸಿ ಬಸ್: ಓರ್ವ ಸಾವು, ಹಲವರಿಗೆ ಗಾಯ

Vishwanath S

ಮದ್ದೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸೇತುವೆಯಿಂದ ಶಿಂಷಾನದಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಬಸ್ ಮದ್ದೂರಿನ ಶಿವಪುರ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಟೈರ್ ಸ್ಫೋಟಗೊಂಡು ಬಸ್ 50 ಅಡಿ ಆಳದ ನದಿಗೆ ಉರುಳಿ ಬಿದ್ದಿದೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದಾರೆಂದು ಶಂಕಿಸಲಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

SCROLL FOR NEXT