(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಚೇಸಿಂಗ್ ಯತ್ನ ವಿಫಲವಾಗಿ ಹಿಂದಿರುಗುವಾಗ ಅಪಘಾತ

ತಪಾಸಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಬೈಕ್ ಸವಾರರನ್ನು ಬೈಕ್ ನಲ್ಲೇ ಬೆನ್ನಟ್ಟಿದ ಇಬ್ಬರು ಪೊಲೀಸ್ ಪೇದೆಗಳಿಗೆ ರಾಜಭವನ ಸಮೀಪದ ತಿಮ್ಮಯ್ಯ ವೃತ್ತದಲ್ಲಿ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ...

ಬೆಂಗಳೂರು: ತಪಾಸಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಬೈಕ್ ಸವಾರರನ್ನು ಬೈಕ್ ನಲ್ಲೇ ಬೆನ್ನಟ್ಟಿದ ಇಬ್ಬರು ಪೊಲೀಸ್ ಪೇದೆಗಳಿಗೆ ರಾಜಭವನ ಸಮೀಪದ ತಿಮ್ಮಯ್ಯ ವೃತ್ತದಲ್ಲಿ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಶಿವಾಜಿನಗರ ಠಾಣೆ ಪೊಲೀಸ್ ಪೇದೆ ಜಯಣ್ಣ ಅವರ ಕಾಲು ಮುರಿದಿದ್ದು, ಮಂಜುನಾಥ್ ರ ಪಕ್ಕೆಲುಬಿಗೆ ಹಾನಿಯಾಗಿದೆ. ಅದೃಷ್ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಾಜಿನಗರ ಠಾಣೆ ಪೊಲೀಸರು ರಾತ್ರಿ ಕ್ವೀನ್ಸ್ ರಸ್ಯೆಯಲ್ಲಿ ಅನುಮಾನಾಸ್ಪದ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದರು. ಮುಂಜಾನೆ 3.30ರ ಸುಮಾರಿಗೆ ಅದೇ ಮಾರ್ಗದಲ್ಲಿ ಬೈಕ್ ಬಂದಿದೆ. ಈ ಬೈಕ್ ನಲ್ಲಿ ನಂಬರ್ ಫ್ಲೇಟ್ ಇಲ್ಲದನ್ನು ಗಮನಿಸಿದ ಪೊಲೀಸರು ಸವಾರರಿಗೆ ಬೈಕ್ ನಿಲ್ಲಿಸದೆ ಪರಾರಿಯಾಗಿದ್ದಾರೆ. ಕೂಡಲೇ ಇಬ್ಬರೂ ಬೈಕ್ ನಲ್ಲಿ ಬೆನ್ನಟ್ಟಿದ್ದಾರೆ. ತಿಮ್ಮಯ್ಯ ವೃತ್ತದವರೆಗೂ ಹಿಂಬಾಲಿಸಿದ ಪೊಲೀಸರಿಗೆ ಆರೋಪಿಗಳ ಬೈಕ್ ಸಿಗಲಿಲ್ಲ. ಬಳಿಕ ಪೇದೆಗಳು ರಾಜಭವನದ ಮಾರ್ಗವಾಗಿ ಕ್ವೀನ್ಸ್ ರಸ್ತೆಗೆ ವಾಪಸಾಗುವಾಗ ಏರ್ ಪೋರ್ಟ್ ರಸ್ತೆಯಿಂದ ವೇಗವಾಗಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT