(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪೊಲೀಸ್ ವಶಕ್ಕೆ ಬನ್ನಂಜೆ

ಭೂಗತ ಪಾತಕಿ ಬನ್ನಂಜೆ ರಾಜಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಸಿಬಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ...

ಬೆಂಗಳೂರು: ಭೂಗತ ಪಾತಕಿ ಬನ್ನಂಜೆ ರಾಜಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಸಿಬಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ರಾಜಾನನ್ನು ನ್ಯಾಯಾಲಯಕ್ಕೆ ಕರೆತಂದ ಸಿಸಿಬಿ ಪೊಲೀಸರು, 3ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಪ್ರಭು ಅವರ ಮುಂದೆ ಹಾಜರುಪಡಿಸಿದರು. 1997ರಲ್ಲಿ ನಡೆದಿದ್ದ ಕದಿರೇನಹಳ್ಳಿ ಶೂಟೌಟ್ ಪ್ರಕರಣದ ಸಂಬಂಧ ರಾಜಾನನ್ನು ಮನವಿ ಮಾಡಿದ್ದರು.

ಮನವಿ ಆಲಿಸಿದ ನ್ಯಾಯಾಧೀಶರು, ಪ್ರಕರಣ ನಡೆದು 19 ವರ್ಷಗಳಾಗಿವೆ. ಈಗಲೂ ಆತನ ವಿಚಾರಣೆ ಅವಶ್ಯಕತೆ ಇದೆಯಾ? ಎಂದು ಪ್ರಶ್ನಿಸಿದರು. ಅಲ್ಲದೇ ಆರೋಪಿ ಪರಾರಿಯಾದ  ಬಗ್ಗೆ ಚಾರ್ಜ್ ಶೀಟ್ ಹಾಕಿದ 10 ವರ್ಷದೊಳಗೆ ಬಲವಾದ ಸಾಕ್ಷಿ. ಮಾಹಿತಿ ಲಭ್ಯವಾಗದಿದ್ದರೆ, ಆರೋಪಿಯನ್ನು ಖುಲಾಸೆ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೀಗಿರುವಾಗ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಾಧ್ಯವೇ? ಹೊರದೇಶದಲ್ಲಿದ್ದು ಕೊಲೆಯ ಹೊಣೆ ಹೊತ್ತರೆ ಅದನ್ನು ಪರಿಗಣಿಸಲು ಸಾಕ್ಷ್ಯ ಬೇಡವೇ ಎಂದು ಕೋರ್ಟ್ ಪ್ರಶ್ನಿಸಿತ್ತು. ಇದಕ್ಕೆ ಪ್ರತಿಯಾಗಿ ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ಬೇಕಾದ ಸಾಕ್ಷ್ಯಗಳನ್ನು ನೀಡಿದ್ದರಿಂದ, ಪರಿಶೀಲಿಸಿ 14 ದಿನಗಳ ಕಾಲ ಪೊಲೀಸ್ ವಶಕ್ಕೆ ಆದೇಶ ನೀಡಿದ್ದಾರೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ರಾಜಾನನ್ನು ಬಾಡಿ ವಾರೆಂಟ್ ಮೂಲಕ ಸಿಸಿಬಿ ಏಸಿಪಿ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ ತಮ್ಮ ವಶಕ್ಕೆ ಪಡೆದು ನಗರಕ್ಕೆ ಕರೆತಂದು ಪರಪ್ಪನ ಅಗ್ರಹಾರದಲ್ಲಿಟ್ಟಿದ್ದರು. ಗುರುವಾರ ಬೆಳಗ್ಗೆ ಬನ್ನಂಜೆ ರಾಜಾಗೆ ಬುಲೆಟ್ ಪ್ರೂಫ್ ಜಾಕೆಟ್ ತೊಡಿಸಿ, ಪರಪ್ಪನ ಅಗ್ರಹಾರದಿಂದ ನ್ಯಾಯಾಲಯದವರಿಗೆ ಸಿಗ್ನಲ್ ಫ್ರೀ ಮೂಲಕ ಕೋರ್ಟ್ ಗೆ ಕರೆತರಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT