ಬೆಂಗಳೂರು: ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ.
ಅಂತಾರಾಷ್ಟ್ರೀಯ ಜಲ ಸಂಘಟನೆ ಮತ್ತು ಇಂಡಿಯನ್ ವಾಟರ್ ವರ್ಕ್ಸ್ ಅಸೋಸಿಯೇಶನ್, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳ ಚರಂಡಿ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ನಡೆಸುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಸೇರಿ ಅನೇ ಗಣ್ಯರು ಭಗವಹಿಸುವರು ಎಂದು ಬೆಂಗಳೂರು ಜಲ ಮಂಡಳಿ ಮುಖ್ಯ ಎಂಜಿನಿಯರ್ ಎಸ್.ಕೃಷ್ಣಪ್ಪ ಗುರುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.