ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಅಪಹರಿಸಿದ್ದಾಕೆ ಆತ್ಮಹತ್ಯೆಗೆ ಶರಣು..!

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ...

ಧಾರವಾಡ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ.

ಧಾರವಾಡದ ಲಕ್ಷ್ಮೀಸಿಂಗನಕೇರಿ ನಿವಾಸಿ ಸುರೇಖಾ ಕಾಲಾಡಿ (24 ವರ್ಷ) ಮಾನಸಿಕವಾಗಿ ನೊಂದು ಧಾರವಾಡ ಕೇಂದ್ರ ಕಾರಾಗೃಹದ ಶೌಚಾಲಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎರಡು ಬಾರಿ ಗರ್ಭಪಾತ ಆದ ಮೇಲೆ ಮಗು ಹೆರುವ ಆಸೆ ಕೈಗೂಡದೆ ಬೇಸತ್ತಿದ್ದ ಸುರೇಖಾ ಬೇರೊಬ್ಬರ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.

ಹುಬ್ಳಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನರ್ಸ್ ವೇಷದಲ್ಲಿ ಬಂದು ಅನಿತಾ ಎಂಬುವವರ 10 ದಿನಗಳ ಹೆಣ್ಣುಮಗುವನ್ನು ಅಪಹರಿಸಿದ್ದರು ಎಂದು ಮೊದಲು ವರದಿಯಾಗಿತ್ತು. ಆದರೆ ಈಕೆ ಮಗುವನ್ನು ಕದ್ದಿರಲಿಲ್ಲ. ಬದಲಾಗಿ ಮಗುವಿನ ಅಜ್ಜಿಯೇ ರು.500ಗೆ ಮಾರಾಟ ಮಾಡಿದ್ದರು ಎಂದು ಸುರೇಖಾ ಪತಿ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT