(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಫೆ.3ರಿಂದ ಗೂಡ್ಸ್ ವಾಹನಗಳ ಸಂಚಾರ ನಿಷೇಧ

ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ-2016 ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ಗಣ್ಯರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಫೆ.1 ರಿಂದ 5ರವರೆಗೆ ಬಳ್ಳಾರಿ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಸಣ್ಣ ಮತ್ತು ಮಧ್ಯಮ...

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ-2016 ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ಗಣ್ಯರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಫೆ.1 ರಿಂದ 5ರವರೆಗೆ ಬಳ್ಳಾರಿ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಸಣ್ಣ ಮತ್ತು ಮಧ್ಯಮ ಗಾತ್ರದ ಗೂಡ್ಸ್ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ನಿರ್ಬಂಧ

ಬಳ್ಳಾರಿ ರಸ್ತೆಯ ಯಲಹಂಕದಿಂದ ಮೇಖ್ರಿ ವೃತ್ತ, ರಮಣಮಹರ್ಶಿ ರಸ್ತೆಯ ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್, ಸ್ಯಾಂಕಿ ರಸ್ತೆಯ ರಾಜಭವನದಿಂದ ಯಶವಂತಪುರ ವೃತ್ಥ, ಸಿ.ವಿ.ರಾಮನ್ ರಸ್ತೆಯ ಐಐಎಸ್ ಸಿಯಿಂದ ಮೇಖ್ರಿ ವೃತ್ತ, ಜಯಮಹಲ್ ರಸ್ತೆಯ ಮೇಖ್ರಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣ, ಕನ್ನಿಂಗ್ ಹ್ಯಾಮ್ ರಸ್ತೆಯ ಬಾಳೇಕುಂದ್ರಿ ವೃತ್ತದಿಂದ ಲೀ ಮೆರಿಡಿಯನ್ ಹೋಟೆಲ್, ಇನ್ ಫೆಂಟ್ರಿ ರಸ್ತೆಯ ಅಲಿ ಆಸ್ಕರ್ ರಸ್ತೆಯಿಂದ ಸಂಚಾರ ಕೇಂದ್ರ ಕಚೇರಿ, ರಾಜಭವನ ರಸ್ತೆಯ ಸಿಟಿಒದಿಂದ ಬಸವೇಶ್ವರ ವೃತ್ತ, ರೇಸ್ ಕೋರ್ಸ್ ರಸ್ತೆಯ ಬಸವೇಶ್ವರ ವೃತ್ತದಿಂದ ಆನಂದ ರಾವ್ ವೃತ್ತ, ಕುಮಾರಕೃಪ ರಸ್ತೆಯ ವಿಂಡ್ಸರ್ ಮ್ಯಾನರ್ ಜಂಕ್ಷನ್ ನಿಂದ ಶಿವಾನಂದ ವೃತ್ತದವರೆಗೆ ಫೆ.1 ರಿಂದ 5 ರವರೆಗೆ ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಸಣ್ಣ ಮತ್ತು ಮಧ್ಯಮ ಗಾತ್ರದ ಗೂಡ್ಸ್ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT