ರಮೇಶ್ ಆರೋಪದಲ್ಲಿ ಹುರುಳಿಲ್ಲ 
ಜಿಲ್ಲಾ ಸುದ್ದಿ

ರಮೇಶ್ ಆರೋಪದಲ್ಲಿ ಹುರುಳಿಲ್ಲ

ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರಾಜಕೀಯ ದ್ವೇಷದ ಮಾತುಗಳನ್ನು ಆಡುವ ಮೂಲಕ ಈಗಿನ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ...

ಬೆಂಗಳೂರು: ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ರಾಜಕೀಯ ದ್ವೇಷದ ಮಾತುಗಳನ್ನು ಆಡುವ ಮೂಲಕ ಈಗಿನ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನ ಕೆಲ ಶಾಸಕರ ಒತ್ತಡಕ್ಕೆ ಮಣಿದ ಬಿಬಿಎಂಪಿ ಅಧಿಕಾರಿಗಳು ಸುಮಾರು ರು. 155 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬ ರಮೇಶ್ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಸತ್ಯನಾರಾಯಣ, ಬಿಬಿಎಂಪಿಯಲ್ಲಿ ಅಂತಹ ಯಾವುದೇ ಹಗರಣ ನಡೆದಿಲ್ಲ. ಬಿಬಿಎಂಪಿ ಅಧಿಕಾರ ಹಿಡಿಯುವಲ್ಲಿ ರಾಜರಾಜೇಶ್ವರಿನಗರ ಕೆ.ಆರ್.ಪುರಂ, ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರು ಕಾರಣರಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ದ್ವೇಷದಿಂದ ರಮೇಶ್ ಆರೋಪ ಮಾಡಿದ್ದಾರೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಬಂದ ಬಳಿಕ ಇದುವರೆಗೆ ಒಂದೇ ಒಂದೂ ಎಲ್ ಒಸಿ ಕೊಟ್ಟಿಲ್ಲ ಎಂಬುದನ್ನು ರಮೇಶ್ ಮನಗಾಣಬೇಕು ಎಂದು ತಾಕೀತು ಮಾಡಿದ್ದಾರೆ.

ಬಿಬಿಎಂಪಿಯಿಂದ ಕಾಮಗಾರಿ ಮುಗಿಯುವ ಮುನ್ನವೇ ಹಣ ನೀಡಲಾಗಿದೆ ಎಂಬ ಆರೋಪವೂ ನಿರಾಧಾರದಿಂದ ಕೂಡಿದೆ ಎಂದು ಸತ್ಯಾನಾರಾಯಣ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT