ಚರ್ಚ್ ಸ್ಟ್ರೀಟ್ 
ಜಿಲ್ಲಾ ಸುದ್ದಿ

ಉಗ್ರ ಜಾವೇದ್ ರಫೀಕ್ ಮನೆಯಲ್ಲೇ ತನಿಖೆ ನಡೆಸಿದ ಅಧಿಕಾರಿಗಳು

ಜ.23 ರಂದು ಪರಪ್ಪನ ಅಗ್ರಹಾರದ ವಿನಾಯಕ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಬಂಧನಕ್ಕೊಳಗಾದ ಜಾವೇದ್ ರಫೀಕ್ ನನ್ನು ವಿಶೇಷ ಭದ್ರತೆಯಲ್ಲಿ ಕರೆತಂದು...

ಬೆಂಗಳೂರು: ಜ.23 ರಂದು ಪರಪ್ಪನ ಅಗ್ರಹಾರದ ವಿನಾಯಕ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಬಂಧನಕ್ಕೊಳಗಾದ ಜಾವೇದ್ ರಫೀಕ್ ನನ್ನು ವಿಶೇಷ ಭದ್ರತೆಯಲ್ಲಿ ಕರೆತಂದು , ಆತನ ಮನೆಯಲ್ಲೇ 45 ನಿಮಿಷಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮನೆಯಲ್ಲಿದ್ದ ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಶನಿವಾರ ಸುಮಾರು 50 ಮಂದಿ ಪೊಲೀಸರ ಬಿಗಿ ಭದ್ರತೆಯಲ್ಲಿ  ಪರಪ್ಪನ ಅಗ್ರಹಾರದಲ್ಲಿನ ವಿನಾಯಕ ನಗರದ ಮನೆಗೆ ಕರೆದುಕೊಂಡು ಹೋದ ಅಧಿಕಾರಿಗಳು ಸುಮಾರು 45 ನಿಮಿಷಗಳ ಕಾಲ ಮನೆಯನ್ನು ತಪಾಸಣೆಗೊಳಪಡಿಸಿದ್ದರು.


ನಂತರ ಮನೆಯಲ್ಲಿದ್ದ ಸಿಡಿ ಸೇರಿದಂತೆ ಪ್ರಮುಖ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳೆದ 2014 ರ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣ ಹಾಗೂ ಫ್ರಾನ್ಸ್  ಉಪರಾಯಭಾರ ಕಚೇರಿಗೆ ಬೆದರಿಕೆ ಪತ್ರವನ್ನು ತನ್ನ ಮನೆಯಲ್ಲೇ ತಯಾರು ಮಾಡಿದ್ದ ಎಂದು ತನಿಖಾಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಶಂಕಿತ ಉಗ್ರ ರಫೀಕ್ ನನ್ನು ಜನವರಿ 23 ರಂದು ತೆಲಂಗಾಣದ ಸಿಐಸಿ ಹಾಗೂ ಎನ್ ಐಎ ಅಧಿಕಾರಿಗಳು ಬಂಧಿಸಿದ್ದರು.  ಆತನನ್ನು ಮಡಿವಾಳದ ವಿಚಾರಣಾ ಕೇಂದ್ರದಲ್ಲಿ ವಿಚಾರಣೆಗೊಳಪಡಿಸಿದ್ದ ಅಧಿಕಾರಿಗಳು ಆತನು ಮಾಡಿರುವ ಒಂದೊಂದೇ ಉಗ್ರ ಚಟುವಟಿಕೆಗಳನ್ನು ಬಯಲಿಗೆಳೆಯುತ್ತಿದ್ದಾರೆ


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT