ಚಿದಾನಂದ ಮೂರ್ತಿ 
ಜಿಲ್ಲಾ ಸುದ್ದಿ

ಹಿಂದೂ ರಾಷ್ಟ್ರದ ಉಳಿವಿಗೆ ಹಿಂಸೆಗೂ ಸಿದ್ದರಾಗಬೇಕಿದೆ: ಚಿಮೂ

ದೇಶವನ್ನು ಹಿಂದೂ ರಾಷ್ಟ್ರವಾಗಿ ಉಳಿಸುವುದು ಮತ್ತು ಧರ್ಮಕ್ಕೆ ಸಂಕಟ ಎದುರಾದಾಗ ಹಿಂಸೆಗೆ ಸಿದ್ಧರಿರಬೇಕಾಗುವುದು ಅನಿವಾರ್ಯವಾಗಿರುತ್ತದೆ ಎಂದು ...

ಬೆಂಗಳೂರು: ದೇಶವನ್ನು ಹಿಂದೂ ರಾಷ್ಟ್ರವಾಗಿ ಉಳಿಸುವುದು ಮತ್ತು ಧರ್ಮಕ್ಕೆ ಸಂಕಟ ಎದುರಾದಾಗ ಹಿಂಸೆಗೆ ಸಿದ್ಧರಿರಬೇಕಾಗುವುದು ಅನಿವಾರ್ಯವಾಗಿರುತ್ತದೆ ಎಂದು ಸಂಶೋಧಕ ಡಾ.ಎಂ, ಚಿದಾನಂದಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾ ಶನಿವಾರ ಆಯೋಜಿಸಿದ್ದ ಅಖಿಲ ಭಾರತ ಹಿಂದೂ ಮಹಸಭಾ ಕರ್ನಾಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಧರ್ಮಕ್ಕಾಗಿ ಕೊಲ್ಲು ಎಂದು ಕುರಾನ್ ಹೇಳಿದರೇ ಧರ್ಮಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧನಿರು ಎಂದು ಹಿಂದೂ ಧರ್ಮ ಗ್ರಂಥಗಳು ಹೇಳುತ್ತವೆ. ಹಿಂದೂ ಧರ್ಮ ಗ್ರಂಥಗಳು ಹೇಳುತ್ತವೆ, ಹಿಂದೂ ಧರ್ಮಕ್ಕೆ ಕುತ್ತು ಬರುತ್ತಿರುವ ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರು ಬದುಕಿದ್ದರೇ ತಮ್ಮ  ಅಹಿಂಸಾ ಸಿದ್ಧಾಂತವನ್ನು ಬದಲಿಸಿಕೊಳ್ಳುತ್ತಿದ್ದದರು.

ಕಳೆದ ಜನಗಣತಿಯ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 7ರಷ್ಟು ಇಳಿಕೆಯಾಗಿದೆ. ಮುಸ್ಲಿಮರ ಸಂಖ್ಯೆ ಶೇ.8ರಷ್ಟು ಹೆಚ್ಚಳವಾಗಿದೆ. ಮುಂದೊಂದು ದಿನ ಭಾರತ ಮುಸ್ಲಿಂ ರಾಷ್ಟ್ರವಾಗುವುದರಲ್ಲಿ ಸಂಶಯವೇ ಇಲ್ಲ. ಆದ್ದರಿಂದ ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಎಂದು ಹೇಳಿದರು.

ಮಹಾಸಭಾದ ರಾಜ್ಯಾಧ್ಯಕ್ಷ ನಾ. ಸುಬ್ರಮಣ್ಯ ರಾಜು, ಹಿಂದೂ ಮಹಾಸಭಾದ ನಿಕಟ ಪೂರ್ವರಾಜ್ಯ ಅಧ್ಯಕ್ಷ ಶ್ರವಣ್ ಕುಮಾರ್, ನೂತನ ಕಾರ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಮತ್ತಿತರು ಹಾಜರಿದ್ದರು,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT