ಚಿದಾನಂದ ಮೂರ್ತಿ 
ಜಿಲ್ಲಾ ಸುದ್ದಿ

ಹಿಂದೂ ರಾಷ್ಟ್ರದ ಉಳಿವಿಗೆ ಹಿಂಸೆಗೂ ಸಿದ್ದರಾಗಬೇಕಿದೆ: ಚಿಮೂ

ದೇಶವನ್ನು ಹಿಂದೂ ರಾಷ್ಟ್ರವಾಗಿ ಉಳಿಸುವುದು ಮತ್ತು ಧರ್ಮಕ್ಕೆ ಸಂಕಟ ಎದುರಾದಾಗ ಹಿಂಸೆಗೆ ಸಿದ್ಧರಿರಬೇಕಾಗುವುದು ಅನಿವಾರ್ಯವಾಗಿರುತ್ತದೆ ಎಂದು ...

ಬೆಂಗಳೂರು: ದೇಶವನ್ನು ಹಿಂದೂ ರಾಷ್ಟ್ರವಾಗಿ ಉಳಿಸುವುದು ಮತ್ತು ಧರ್ಮಕ್ಕೆ ಸಂಕಟ ಎದುರಾದಾಗ ಹಿಂಸೆಗೆ ಸಿದ್ಧರಿರಬೇಕಾಗುವುದು ಅನಿವಾರ್ಯವಾಗಿರುತ್ತದೆ ಎಂದು ಸಂಶೋಧಕ ಡಾ.ಎಂ, ಚಿದಾನಂದಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾ ಶನಿವಾರ ಆಯೋಜಿಸಿದ್ದ ಅಖಿಲ ಭಾರತ ಹಿಂದೂ ಮಹಸಭಾ ಕರ್ನಾಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಧರ್ಮಕ್ಕಾಗಿ ಕೊಲ್ಲು ಎಂದು ಕುರಾನ್ ಹೇಳಿದರೇ ಧರ್ಮಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧನಿರು ಎಂದು ಹಿಂದೂ ಧರ್ಮ ಗ್ರಂಥಗಳು ಹೇಳುತ್ತವೆ. ಹಿಂದೂ ಧರ್ಮ ಗ್ರಂಥಗಳು ಹೇಳುತ್ತವೆ, ಹಿಂದೂ ಧರ್ಮಕ್ಕೆ ಕುತ್ತು ಬರುತ್ತಿರುವ ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರು ಬದುಕಿದ್ದರೇ ತಮ್ಮ  ಅಹಿಂಸಾ ಸಿದ್ಧಾಂತವನ್ನು ಬದಲಿಸಿಕೊಳ್ಳುತ್ತಿದ್ದದರು.

ಕಳೆದ ಜನಗಣತಿಯ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 7ರಷ್ಟು ಇಳಿಕೆಯಾಗಿದೆ. ಮುಸ್ಲಿಮರ ಸಂಖ್ಯೆ ಶೇ.8ರಷ್ಟು ಹೆಚ್ಚಳವಾಗಿದೆ. ಮುಂದೊಂದು ದಿನ ಭಾರತ ಮುಸ್ಲಿಂ ರಾಷ್ಟ್ರವಾಗುವುದರಲ್ಲಿ ಸಂಶಯವೇ ಇಲ್ಲ. ಆದ್ದರಿಂದ ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಎಂದು ಹೇಳಿದರು.

ಮಹಾಸಭಾದ ರಾಜ್ಯಾಧ್ಯಕ್ಷ ನಾ. ಸುಬ್ರಮಣ್ಯ ರಾಜು, ಹಿಂದೂ ಮಹಾಸಭಾದ ನಿಕಟ ಪೂರ್ವರಾಜ್ಯ ಅಧ್ಯಕ್ಷ ಶ್ರವಣ್ ಕುಮಾರ್, ನೂತನ ಕಾರ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಮತ್ತಿತರು ಹಾಜರಿದ್ದರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!