ಮದರಸಾ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ನಿಂದ ಮದರಸಾ ಪಠ್ಯಗಳಲ್ಲಿ ದೇಶಭಕ್ತಿ ಬಿತ್ತುವ ಅಂಶಗಳ ಅಳವಡಿಕೆ

ದೇಶದ 25 ಸಾವಿರ ಮದರಸಾಗಳಲ್ಲಿ ಶಿಕ್ಷಣದ ಆಮೂಲಾಗ್ರ ಬದಲಾವಣೆಗೆ ಮುಸ್ಲಿಂ ಸಂಘಟನೆಗಳು ಒಂದಾಗಿವೆ.

ಬೆಂಗಳೂರು: ದೇಶದ 25 ಸಾವಿರ ಮದರಸಾಗಳಲ್ಲಿ ಶಿಕ್ಷಣದ ಆಮೂಲಾಗ್ರ ಬದಲಾವಣೆಗೆ ಮುಸ್ಲಿಂ ಸಂಘಟನೆಗಳು ಒಂದಾಗಿದ್ದು, ನೂತನ ಪಠ್ಯಪುಸ್ತಕಗಳಲ್ಲಿ  ದೇಶಪ್ರೇಮ, ದೇಶಭಕ್ತಿ ಬಿತ್ತುವಂತಹ ಅಂಶಗಳನ್ನು ಅಳವಡಿಸಲಾಗಿದೆ ಎಂದು ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಎಸ್ ಎ ಖಾದರ್ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಗಳಲ್ಲಿ ಭಾರತದ ಇತಿಹಾಸ, ಸ್ವಾತಂತ್ರ್ಯ ಪೂರ್ವದ ಹೋರಾಟ ಹಾಗೂ ಇಸ್ಲಾಂ ಸಮುದಾಯದ ಉದಯ, ಕುರಾನ್ ಏನು ಹೇಳುತ್ತದೆ ಎನ್ನುವುದೂ ಸೇರಿ ಪ್ರಮುಖ ವಿಷಯಗಳನ್ನು ಅಳವಡಿಸಲಾಗಿದೆ. ಅದರ ಅಡಿಯಲ್ಲೇ ಸಮುದಾಯದ ಯುವಕರು ಬೆಳೆಯುತ್ತಾರೆ. ದೇಶ ಪ್ರೇಮ ಹೆಚ್ಚಿಸುವಂತಹ ವಿಷಯಗಳನ್ನು ಹೆಚ್ಚು ಅಳವಡಿಸಲು ಎಜುಕೇಶನ್ ಬೋರ್ಡ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕಡೆ ಮುಖ ಮಾಡುತ್ತಿರುವ ಯುವಕರನ್ನು ಬದಲಾಯಿಸಲಾಗುವುದು. ಇಂತಹ ಕಾರ್ಯವನ್ನು ಮದರಸಾಗಳಿಂದಲೇ ಆರಂಭಿಸುವುದರಿಂದ ಸಮುದಾಯಕ್ಕೂ, ದೇಶಕ್ಕೂ ಒಳ್ಳೆಯ ಹೆಸರು ಬರಲಿದೆ. ಹೀಗಾಗಿ 1 ರಿಂದ 12 ನೇ ತರಗತಿ ವರೆಗಿನ ಪಠ್ಯ ಕ್ರಮ ಬದಲಾಯಿಸಲಾಗಿದೆ ಎಂದರು.
ಉಗ್ರರು ಮುಸ್ಲಿಮರಲ್ಲ: ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಸೈಯದ್ ಮೊಹಮ್ಮದ್ ಅಶ್ರಫ್, ದೇಶದಲ್ಲಿ ಬಂಧನವಾಗಿರುವ ಶಂಕಿತ ಉಗ್ರರು ಇಸ್ಲಾಂ ಧರ್ಮಕ್ಕೆ ಸೇರಿದವರಲ್ಲ. ಇಸಿಸ್ ನಲ್ಲಿರುವವರು ಯಾರೂ ಮುಸಲ್ಮಾನರಲ್ಲ. ಅವರ ಧೋರಣೆಗಳು ಇಸ್ಲಾಂ  ವಿರುದ್ಧವಾಗಿದೆ. ಯಾಕೆಂದರೆ ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ. ಬಂಧಿತರು ತಪ್ಪು ಮಾಡಿದ್ದು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಅದಕ್ಕೆ ಸಮುದಾಯದ ಸಹಕಾರವಿದೆ ಎಂದರು.
ಇಸ್ಲಾಂ ನಲ್ಲಿ 3 ಗುಂಪುಗಳಿವೆ, ಶಿಯಾ, ಸುನ್ನಿ, ವಹಾಬಿ, ಶಿಯಾ ಮತ್ತು ಸುನ್ನಿ ವರ್ಗಗಳು ಯಾವುದೇ ಉಗ್ರ ಚಟುವಟಿಕೆಗಳಲ್ಲಿ ತೊಡಗಿಲ್ಲ. ಆದರೆ ವಹಾಬಿ ಎಂಬ ವರ್ಗ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದೆ. ಈ ನಿಟ್ಟಿನಲ್ಲಿ ದೇಶದ ಯುವಕರು ಇಂತಹ ವರ್ಗಕ್ಕೆ ಸೇರದಂತೆ ತಡೆಯಲು ಹೊಸ ಪಠ್ಯ ಕ್ರಮ ತರಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT