(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಪ್ರಯಾಣಿಕರ ನೆರವಿಗೆ ಬರಲಿದೆ ಸಂಚಾರಿ ದಳ

ನಗರದೊಳಕ್ಕೆ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳ ಪ್ರವೇಶ ನಿರ್ಬಂಧ ಸೋಮವಾರದಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದೆ...

ಬೆಂಗಳೂರು: ನಗರದೊಳಕ್ಕೆ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳ ಪ್ರವೇಶ ನಿರ್ಬಂಧ ಸೋಮವಾರದಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದೆ.

ಖಾಸಗಿ ಬಸ್ ಪ್ರಯಾಣಿಕರ ಪಾಲಿಗೆ ನಗರದ ಆರಂಭ ಮತ್ತು ಅಂತ್ಯ ಇನ್ನೂ ನಾಲ್ಕು ದಿನಗಳ ಕಾಲ ಹೊರ ವಲಯದಿಂದಲೇ ನಡೆಯಲಿದೆ. ಇದಕ್ಕೆ ಸಾರಿಗೆ ಇಲಾಖೆ ಸಿದ್ಧತೆ ನಡೆಸಿದ್ದು, ಪ್ರಯಾಣಿಕರು ಕೂಡ ಸಿದ್ಧವಾಗಬೇಕಿದೆ. ದೂರದೂರುಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳು ನಿಲ್ಲುವ ನಗರದ ಹೊರವಲಯದ ಆರು ಕಡೆಗಳಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಚಾರಿ ದಳ (ಮೊಬೈಲ್ ಸ್ಕ್ವಾಡ್) ಸೇರಿದಂತೆ ಭದ್ರತೆಗಾಗಿ ಎಲ್ಲ ಕಡೆ ಪೊಲೀಸರನ್ನು ನಿಯೋಜಿಸಿದ್ದು, ಈ ಆರೂ ಕಡೆಗಳಿಂದ ಕ್ಷಣ ಕ್ಷಣಕ್ಕೂ ಮೆಜೆಸ್ಟಿಕ್ ಮತ್ತಿತರ ಕಡೆಗೆ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಲಿವೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ನಗರದೊಳಗೆ ಖಾಸಗಿ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಗಳು ಹಾಗೂ ಆಲ್ ಇಂಡಿಯಾಪರ್ಮಿಟ್ ಬಸ್ ಗಳ ಪ್ರವೇಶವನ್ನು ಇಂದಿನಿಂದ ಫೆ.5 ರವರೆಗೆ ಬೆಳಗ್ಗೆ 7ರಿಂದ ರಾತ್ರಿ 10 ರವರೆಗೆ ನಿಷೇಧಿಸಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳು ನಿಲ್ಲುವ ನಗರದ ಹೊರವಲಯದ ಸ್ಥಳಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT