ಕರ್ನಾಟಕ ಆಯುರ್ವೇದ ಯುನಾನಿ ವೈದ್ಯ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುವ ಜಾಗತಿಕ ಸಮಾವೇಶಕ್ಕೆ ಸಭಾಂಗಣ ಮತ್ತು ಮಳಿಗೆಗಳ ನಿರ್ಮಾಣಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಮತ್ತು ಆ 
ಜಿಲ್ಲಾ ಸುದ್ದಿ

ಜಿವಿಕೆ ವಿರುದ್ಧ ಕ್ರಮಕ್ಕೆ ಸಿದ್ಧ

ರಾಜ್ಯದ ಜನರ ಆರೋಗ್ಯ ಸೇವೆಗಾಗಿ ಇರುವ 108 ಆಂಬ್ಯುಲೆನ್ಸ್ ಗಳ ನಿರ್ವಹಣೆಯಲ್ಲಿ ಲೋಪವೆಸಗಿದ್ದಲ್ಲಿ ಜಿವಿಕೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ...

ಬೆಂಗಳೂರು: ರಾಜ್ಯದ ಜನರ ಆರೋಗ್ಯ ಸೇವೆಗಾಗಿ ಇರುವ 108 ಆಂಬ್ಯುಲೆನ್ಸ್ ಗಳ ನಿರ್ವಹಣೆಯಲ್ಲಿ ಲೋಪವೆಸಗಿದ್ದಲ್ಲಿ ಜಿವಿಕೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಭಟನಾ ನಿರತ ಆಂಬ್ಯುಲೆನ್ಸ್ ನೌಕರರ ಬೇಡಿಕೆಗಳಿಗೂ ಸರ್ಕಾರಕ್ಕೂ ಸಂಬಂಧವಿಲ್ಲ. ಈ ಸಂಬಂಧ ಈಗಾಗಲೇ ಸಮಸ್ಯೆ ಬಗೆಹರಿಸುವಂತೆ ಜಿವಿಕೆ ಸಂಸ್ಥೆಗೆ ಸೂಚನೆ ನೀಡಲಾಗಿದೆ.

ಎಸ್ಮಾ ಜಾರಿ ಹಿನ್ನೆಲೆಯಲ್ಲಿ ವಾರದೊಳಗೆ ಹೊಸ ನೌಕರರ ನೇಮಕ ಮಾಡಿಕೊಳ್ಳಲು ಜಿವಿಕೆಗೆ ನಿರ್ದೇಶನ ನೀಡಲಾಗಿದೆ ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಹಾಗೇ ಹಳೆಯ ಆಂಬ್ಯುಲೆನ್ಸ್ ಗಳ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ 113 ತಾಲೂಕು ಆಸ್ಪತ್ರೆಗಳಲ್ಲಿ ಆಯುಷ್ ಚಿಕಿತ್ಸೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಉಳಿದ ತಾಲೂಕುಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ದಕ್ಷಿಣ ಕನ್ನಡ ಹಾಗೂ ಗದನ ಜಲ್ಲೆಗಳಲ್ಲಿ 50 ಆಸಿಗೆಗಳ ಆಯುರ್ವೇದ ಆಸ್ಪತ್ರೆ ಸ್ಥಾಪನೆ ಜತೆಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!