ಕರ್ನಾಟಕ ಆಯುರ್ವೇದ ಯುನಾನಿ ವೈದ್ಯ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುವ ಜಾಗತಿಕ ಸಮಾವೇಶಕ್ಕೆ ಸಭಾಂಗಣ ಮತ್ತು ಮಳಿಗೆಗಳ ನಿರ್ಮಾಣಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಮತ್ತು ಆ 
ಜಿಲ್ಲಾ ಸುದ್ದಿ

ಜಿವಿಕೆ ವಿರುದ್ಧ ಕ್ರಮಕ್ಕೆ ಸಿದ್ಧ

ರಾಜ್ಯದ ಜನರ ಆರೋಗ್ಯ ಸೇವೆಗಾಗಿ ಇರುವ 108 ಆಂಬ್ಯುಲೆನ್ಸ್ ಗಳ ನಿರ್ವಹಣೆಯಲ್ಲಿ ಲೋಪವೆಸಗಿದ್ದಲ್ಲಿ ಜಿವಿಕೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ...

ಬೆಂಗಳೂರು: ರಾಜ್ಯದ ಜನರ ಆರೋಗ್ಯ ಸೇವೆಗಾಗಿ ಇರುವ 108 ಆಂಬ್ಯುಲೆನ್ಸ್ ಗಳ ನಿರ್ವಹಣೆಯಲ್ಲಿ ಲೋಪವೆಸಗಿದ್ದಲ್ಲಿ ಜಿವಿಕೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿಭಟನಾ ನಿರತ ಆಂಬ್ಯುಲೆನ್ಸ್ ನೌಕರರ ಬೇಡಿಕೆಗಳಿಗೂ ಸರ್ಕಾರಕ್ಕೂ ಸಂಬಂಧವಿಲ್ಲ. ಈ ಸಂಬಂಧ ಈಗಾಗಲೇ ಸಮಸ್ಯೆ ಬಗೆಹರಿಸುವಂತೆ ಜಿವಿಕೆ ಸಂಸ್ಥೆಗೆ ಸೂಚನೆ ನೀಡಲಾಗಿದೆ.

ಎಸ್ಮಾ ಜಾರಿ ಹಿನ್ನೆಲೆಯಲ್ಲಿ ವಾರದೊಳಗೆ ಹೊಸ ನೌಕರರ ನೇಮಕ ಮಾಡಿಕೊಳ್ಳಲು ಜಿವಿಕೆಗೆ ನಿರ್ದೇಶನ ನೀಡಲಾಗಿದೆ ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಹಾಗೇ ಹಳೆಯ ಆಂಬ್ಯುಲೆನ್ಸ್ ಗಳ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ 113 ತಾಲೂಕು ಆಸ್ಪತ್ರೆಗಳಲ್ಲಿ ಆಯುಷ್ ಚಿಕಿತ್ಸೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಉಳಿದ ತಾಲೂಕುಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ದಕ್ಷಿಣ ಕನ್ನಡ ಹಾಗೂ ಗದನ ಜಲ್ಲೆಗಳಲ್ಲಿ 50 ಆಸಿಗೆಗಳ ಆಯುರ್ವೇದ ಆಸ್ಪತ್ರೆ ಸ್ಥಾಪನೆ ಜತೆಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT