ರಬಕವಿ: ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ, ರಾಮಪುರ ಮತ್ತು ಹೊಸೂರ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆಯಿಂದ ಏಕಾಏಕಿ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸುಮಾರು 100 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ರೋಗಿಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ಅವಳಿ ನಗರಗಳ ಖಾಸಗಿ ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲೂ ರೋಗಿಗಳು ದಾಖಲಾಗಿದ್ದಾರೆ. ಮೇಲ್ನೋಟಕ್ಕೆ ಕುಡಿಯುವ ನೀರಿನ ದೋಷವೇ ಕಾರಣ ಎನ್ನಲಾಗುತ್ತಿದೆ. ನಿಖರ ಮಾಹಿತಿ ತಿಳಿದಿಲ್ಲ. ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿರುವವರ ಸಂಖ್ಯೆ ನೂರಕ್ಕೂ ಹೆಚ್ಚಿದೆ. ಬಹುತೇಕ ರೋಗಿಗಳು 40 ವರ್ಷ ವಯೋವಾನ ಮೀರಿದವರಾಗಿದ್ದಾರೆ.