ಬೆಂಗಳೂರು ಗ್ರಾಮಾಂತರ

ಅನಿರ್ದಿಷ್ಟಾವಧಿ ಲೇಖನಿ ಸ್ಥಗಿತ ಮುಷ್ಕರ ಎಚ್ಚರಿಕೆ

ರಾಮನಗರ: ಬಾಗಲಕೋಟೆ ಜಿಲ್ಲೆಯ ಸೂಳಿಕೆರೆ ಗ್ರಾಮದಲ್ಲಿ ಕೊಳವೆ ಬಾವಿಗೆ ಬಾಲಕ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲಿನ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಎಂಜಿನಿಯರ್ಗಳನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳ ಹಾಗೂ ನೌಕರರ ಸಂಘದ ಜಿಲ್ಲಾ ಘಟಕವು ಅನಿರ್ದಿಷ್ಟಾವಧಿ ಲೇಖನಿ ಸ್ಥಗಿತ ಮುಷ್ಕರವನ್ನು ಪ್ರಾರಂಬಿಸಲಾಗುವುದು ಎಂದು ಪಿಡಿಒ ರಾಜೇಗೌಡ ತಿಳಿಸಿದ್ದಾರೆ. ಆ.8ರ ಬೆಳಗ್ಗೆ 10ಕ್ಕೆ ನಗರದ ಮಿನಿ ವಿಧಾನಸೌಧದಿಂದ ಜಿಲ್ಲಾ ಪಂಚಾಯಿತಿ ಭವನದವರೆಗೆ ಕಾಲ್ನಡಿಗೆ ಜಾಥಾದಲ್ಲಿ ತೆರಳಗಿ ಜಿ.ಪಂ. ಸಿಇಒ ಡಾ.ಎಂ.ವಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಗುವುದು.ಗ್ರಾ.ಪಂ. ಪಿಡಿಒಗಳು ಹಾಗೂ ಎಂಜಿನಿಯರ್ಗಳು ಪ್ರಸ್ತುತ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ರೈತರು ತಮ್ಮ ಖಾಸಗಿ ಜಮೀನಿನಲ್ಲಿ ತೆರದಿರುವ ಕೊಳವೆ ಬಾವಿಗೆ ಬಾಲಕ ಬಿದ್ದಿರುವುದಕ್ಕೆ ಗ್ರಾಪಂ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿರುವುದು ವಿಷಾದನೀಯ ಎಂದಿದ್ದಾರೆ.

ವಿದ್ಯಾರ್ಥಿಗಳಿಗೆ ವಿಜ್ಞಾನ ತಿಳಿವಳಿಕೆ ಅವಶ್ಯಕ ಭಾರತೀನಗರ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನ ತಿಳಿವಳಿಕೆ ತುಂಬಾ ಅವಶ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಹಂತದದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನ ತಿಳಿವಳಿಕೆ ವಿದ್ಯಾರ್ಥಿ ಜೀವನದಲ್ಲಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತುಂಬಾ ಸಹಾಯಕವಾಗಿವೆ. ಪ್ರತಿಯೊಂದಕ್ಕೂ ವಿಜ್ಞಾನ ಅತ್ಯವಶ್ಯಕವಾಗಿದೆ. ಈ ದಿನಕ್ಕೆ ಮಾತ್ರ ವಿಜ್ಞಾನ ವಸ್ತು ಪ್ರದರ್ಶನವನ್ನು ಸೀಮಿತಗೊಳಿಸಬಾರದು. ಅದನ್ನು ಮೈಗೂಡಿಸಿಕೊಳ್ಳಬೇಕು. ಚಿಕ್ಕವಯಸ್ಸಿನಲ್ಲಿಯೇ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿಕೊಂಡಲ್ಲಿ ಮುಂದಿನ ಜೀವನದಲ್ಲಿ ಪ್ರಯೋಜನ ಪಡೆಯಬಹುದೆಂದು ತಿಳಿವಳಿಕೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಜ್ಞಾನ ಅತ್ಯವಶ್ಯವಾಗಿದೆ. ಪ್ರೌಢಶಿಕ್ಷಣ ಜೀವನಕ್ಕೆ ಒಂದು ತಿರುವು ನೀಡುವ ಹಂತವಾಗಿದೆ. ಆದ್ದರಿಂದ ಪ್ರೌಢಶಾಲಾ ಮಟ್ಟದಲ್ಲಿಯೇ ಹೆಚ್ಚು ಜ್ಞಾನವನ್ನು ಬೆಳೆಸಿಕೊಂಡರೆ ಮುಂದಿನ ಸವಾಲುಗಳನ್ನು ಸುಲಭವಾಗಿ ಎದುರಿಸಬಹುದಾಗಿದೆ ಎಂದರು.ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸತತ ಮೂರು ವರ್ಷಗಳಿಂದ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಇನ್ಸ್ಪೈರ್ ಅವಾರ್ಡ್ ಪಡೆದಿರುವುದು ಪ್ರಶಂಸನೀಯ. ಇದಕ್ಕೆ ಕಾರಣರಾದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಜಿ.ಟಿ. ರವೀಂದ್ರಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಹಲವಾರು ಪ್ರತಿಭೆಗಳನ್ನು ಒಳಗೊಂಡಿದ್ದರೂ ಭಯದಿಂದ ಅದನ್ನು ಪ್ರದರ್ಶಿಸಲು ಮುಂದೆ ಬರುತ್ತಿಲ್ಲ. ವಿದ್ಯಾರ್ಥಿಗಳು ಯಾವುದೇ ರೀತಿಯ ಭಯಪಡದೆ ಧೈರ್ಯದಿಂದ ಪ್ರಶ್ನಿಸುವ ಮತ್ತು ಉತ್ತರಿಸುವ ಮನೋಭಾವ ಉಳ್ಳವರಾಗಬೇಕೆಂದು ತಿಳಿವಳಿಕೆ ನೀಡಿದರು. ಇದೇ ಸಂದರ್ಭದಲ್ಲಿ ಮುಖ್ಯಶಿಕ್ಷಕ ಎಚ್.ವಿ.ಜಯರಾಮು, ವಿಜ್ಞಾನ ಶಿಕ್ಷಕರಾದ ಸೋಮಸುಂದರ್, ಪುಟ್ಟಸ್ವಾಮಯ್ಯ, ಸಹಶಿಕ್ಷಕ ಜ್ಯೋತಿಶ್ರೀ, ಕುಮಾರ್, ಹಿರಿಯ ಶಿಕ್ಷಕಿ ಸತ್ಯಭಾಮ ಸೇರಿದಂತೆ ಇತರರು ಉಪಸ್ಥಿತರಿದ್ದರು. ಮಂಡ್ಯ ತಾ.ಉಪನ್ಯಾಸಕರ ಸಂಘ ಉದ್ಘಾಟನೆ 9 ರಂದು
ಮಂಡ್ಯ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.9 ರಂದು ತಾಲೂಕು ಉಪನ್ಯಾಸಕರ ಸಂಘದ ಉದ್ಘಾಟನೆ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಪದವಿಪೂರ್ರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆಯುವ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಉದ್ಘಾಟಿಸುವರು. ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿವಿಧ ವಿಭಾಗಗಳ ವಿವಿಧ ತಾಲೂಕುಗಳ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಪ್ರತಿಭಾ ಪುರಸ್ಕಾರ ನೀಡುವರು. ಸಮಾರಂಭದಲ್ಲಿ ಪ.ಪೂ.ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಪುಟ್ಟಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕರ ರಾಜ್ಯ ಸಂಘದ ಅಧ್ಯಕ್ಷ ತಿಮ್ಮಯ್ಯ, ಕಾರ್ಯದರ್ಶಿ ಎ.ಎಚ್. ನಿಂಗೇಗೌಡ, ಖಜಾಂಚಿ ಜಯಣ್ಣ, ಮಂಡ್ಯ ಜಿಲ್ಲಾ ಪ.ಪೂ.ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಜೆ. ಶಂಕರೇಗೌಡ, ಸಂಘದ ಗೌರವಾಧ್ಯಕ್ಷ ವಿ.ಕೆ.ಜಗದೀಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶೈಕ್ಷಣಿಕ ಚಟುವಟಿಕೆ ಉದ್ಘಾಟನೆ
ರಾಮನಗರ: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ 2014-15ನೇ ಸಾಲಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯರಿಗೆ ಕ್ರೀಡಾ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.7ರ ಬೆಳಗ್ಗೆ 10ಕ್ಕೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಡಿ.ಲಿಂಗರಾಜು ಅಧ್ಯಕ್ಷತೆ ವಹಿಸುವರು.
ಗೋವಿಂದರಾಜು ನಿಧನ
ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಗೋವಿಂದರಾಜು(47) ನಿಧನರಾಗಿದ್ದಾರೆ.ಅನಾರೋಗ್ಯದ ಪರಿಣಾಮ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಪ್ರಸ್ತುತ ದೊಡ್ಡಬಳ್ಳಾಪುರ ನಗರದಲ್ಲಿ ವಾಸವಾಗಿದ್ದ ಅವರು ಮೂಲತಃ ಉಜ್ಜನಿ ಹೊಸಹಳ್ಳಿ ಗ್ರಾಮದವರು. ಮಂಗಳವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT