ಬೆಂಗಳೂರು ಗ್ರಾಮಾಂತರ

ಪಿಡಿಒ, ಎಇಇ ಅಮಾನತು ರದ್ದುಗೊಳಿಸಿ: ಶಾಸಕರಿಗೆ ಮನವಿ

ಮಾಗಡಿ: ಪಿಡಿಒ ಮತ್ತು ಎಇಇ ಅವರನ್ನು ಸರ್ಕಾರ ಅಮಾನುಗೊಳಿಸಿರುವುದನ್ನು ಖಂಡಿಸಿ ತಾಲೂಕಿನ ಪಿಡಿಓಗಳ ನಿಯೋಗ ಶಾಸಕರನ್ನು ಭೇಟಿ ಅವರ ಅಮಾನತನ್ನು ರದ್ದುಪಡಿಸುವಂತೆ ಆಗ್ರಹಿಸಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರಲ್ಲಿ ಮನವಿ ಸಲ್ಲಿಸಿದರು.
ಇದೇ ವೇಳೆ ಹುಲೀಕಲ್ ಪಿಡಿಒ ವೆಂಕಟೇಶ್ ಮಾತನಾಡಿ ಖಾಸಗಿ ಜಮೀನಿನಲ್ಲಿ ಕೊರೆದಿರುವ ಕೊಳವೆ ಬಾವಿ ಕೊರೆದಿರುವುದು, ಅದು ನಿರುಪಯುಕ್ತ ಎಂದು ಪಿಡಿಒ ಗಮನಕ್ಕೆ ಬಂದಿರುವುದಿಲ್ಲ. ಹೇಗೆ ಪಿಡಿಒಗಳು ನಿರುಪಯುಕ್ತ ಕೊಳವೆ ಬಾವಿ ಎಂದು ತಿಳಿದು ಮುಚ್ಚಿಸಲು ಸಾಧ್ಯ. ಕೇವಲ ಪಿಡಿಒ ಮತ್ತು ಎಇಇ ಅವರನ್ನು ಹೊಣೆಗಾರರನ್ನಾಗಿ ಮಾಡಿ ಅಮಾನುತುಗೊಳಿಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರ ಕೂಡಲೆ ಅವರ ಅಮಾನತನ್ನು ರದ್ದುಗೊಳಿಸಿ ಕರ್ತವ್ಯಕ್ಕೆ  ನಿಯೋಜಿಸುವಂತೆ ಮನವಿ ಮಾಡಿ ದರು. ಮನವಿ ಸ್ವೀಕರಿಸಿದ ಶಾಸಕ ಎಚ್.ಸಿ. ಬಾಲಕೃಷ್ಣ, ಪಿಡಿಒ ಮತ್ತು ಎಇಇ ಅವರ ಅಮಾನುತು ಸಂಬಂಧ ಸಚಿವರಲ್ಲಿ ಚರ್ಚಿಸಿ, ಸಮಸ್ಯೆ ಬಗೆಹರಿಸುವಂತೆ  ಕೋರುವುದಾಗಿ ಪಿಡಿಒಗಳ ಮನವೊಲಿಸಿದರು.
ತಾ.ಪಂ. ಅಧ್ಯಕ್ಷೆ ಅನುಸೂಯಮ್ಮ ಮರಿಗೌಡ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜು, ತಹಸೀಲ್ದಾರ್ ಶಿವಕುಮಾರ್ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿ. ರಂಗೇಗೌಡ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT