ಬೆಂಗಳೂರು ಗ್ರಾಮಾಂತರ

ಪಿಡಿಒ, ಎಇಇ ಅಮಾನತು ರದ್ದುಗೊಳಿಸಿ: ಶಾಸಕರಿಗೆ ಮನವಿ

ಮಾಗಡಿ: ಪಿಡಿಒ ಮತ್ತು ಎಇಇ ಅವರನ್ನು ಸರ್ಕಾರ ಅಮಾನುಗೊಳಿಸಿರುವುದನ್ನು ಖಂಡಿಸಿ ತಾಲೂಕಿನ ಪಿಡಿಓಗಳ ನಿಯೋಗ ಶಾಸಕರನ್ನು ಭೇಟಿ ಅವರ ಅಮಾನತನ್ನು ರದ್ದುಪಡಿಸುವಂತೆ ಆಗ್ರಹಿಸಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರಲ್ಲಿ ಮನವಿ ಸಲ್ಲಿಸಿದರು.
ಇದೇ ವೇಳೆ ಹುಲೀಕಲ್ ಪಿಡಿಒ ವೆಂಕಟೇಶ್ ಮಾತನಾಡಿ ಖಾಸಗಿ ಜಮೀನಿನಲ್ಲಿ ಕೊರೆದಿರುವ ಕೊಳವೆ ಬಾವಿ ಕೊರೆದಿರುವುದು, ಅದು ನಿರುಪಯುಕ್ತ ಎಂದು ಪಿಡಿಒ ಗಮನಕ್ಕೆ ಬಂದಿರುವುದಿಲ್ಲ. ಹೇಗೆ ಪಿಡಿಒಗಳು ನಿರುಪಯುಕ್ತ ಕೊಳವೆ ಬಾವಿ ಎಂದು ತಿಳಿದು ಮುಚ್ಚಿಸಲು ಸಾಧ್ಯ. ಕೇವಲ ಪಿಡಿಒ ಮತ್ತು ಎಇಇ ಅವರನ್ನು ಹೊಣೆಗಾರರನ್ನಾಗಿ ಮಾಡಿ ಅಮಾನುತುಗೊಳಿಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರ ಕೂಡಲೆ ಅವರ ಅಮಾನತನ್ನು ರದ್ದುಗೊಳಿಸಿ ಕರ್ತವ್ಯಕ್ಕೆ  ನಿಯೋಜಿಸುವಂತೆ ಮನವಿ ಮಾಡಿ ದರು. ಮನವಿ ಸ್ವೀಕರಿಸಿದ ಶಾಸಕ ಎಚ್.ಸಿ. ಬಾಲಕೃಷ್ಣ, ಪಿಡಿಒ ಮತ್ತು ಎಇಇ ಅವರ ಅಮಾನುತು ಸಂಬಂಧ ಸಚಿವರಲ್ಲಿ ಚರ್ಚಿಸಿ, ಸಮಸ್ಯೆ ಬಗೆಹರಿಸುವಂತೆ  ಕೋರುವುದಾಗಿ ಪಿಡಿಒಗಳ ಮನವೊಲಿಸಿದರು.
ತಾ.ಪಂ. ಅಧ್ಯಕ್ಷೆ ಅನುಸೂಯಮ್ಮ ಮರಿಗೌಡ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜು, ತಹಸೀಲ್ದಾರ್ ಶಿವಕುಮಾರ್ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿ. ರಂಗೇಗೌಡ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT