ಬೆಂಗಳೂರು ಗ್ರಾಮಾಂತರ

ಸಂಸ್ಕಾರಯುತ ಶಿಕ್ಷಣ ಕಲಿಯುವುದು ಅವಶ್ಯ

ನೆಲಮಂಗಲ: ಮಕ್ಕಳು ಸಾಮಾಜಿಕ ಮೌಲ್ಯವುಳ್ಳ ಸಂಸ್ಕಾರಯುತ ಶಿಕ್ಷಣ ಕಲಿಯುವುದು ಅವಶ್ಯಕವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗುರುರಾಜು ತಿಳಿಸಿದರು.
ಅವರು ಬುಧವಾರ ತಾಲೂಕಿನ ಹೊನ್ನೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ  ಸುಂದರ ವಿದ್ಯಾಗಣಪತಿಯ ದೇವಾಲಯ
ಉದ್ಘಾಟನಾ ಸಭೆಯಲ್ಲಿ ಮಾತನಾಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಎನ್. ಪರಮೇಶ್ ಮಾತನಾಡುತ್ತಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿಯೇ ಉತ್ತಮ ಮಾದರಿ ಶಾಲೆಯನ್ನಾಗಿಸಲು ಶಾಲೆಯ ಶಿಕ್ಷಕರು ಹೆಚ್ಚಿನ ಶ್ರಮ ಪಟ್ಟಿದ್ದಾರೆ ಎಂದರು.
ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯ್ತಿ ವತಿಯಿಂದ ಹೊನ್ನೇನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚು ಮಕ್ಕಳಿದ್ದು, ಕಾಡು ಪ್ರದೇಶದಿಂದ ಇಲ್ಲಿಗೆ ಬರುವ ಮಕ್ಕಳು ಪ್ರತಿ ದಿನ ಕಾಡು ಪ್ರಾಣಿಗಳ ಭಯದಿಂದಲೇ ಶಾಲೆಗೆ ಬರುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಪ್ರೌಢಶಾಲೆಯನ್ನು ಮಂಜೂರು ಮಾಡಿಕೊಡಬೇಕೆಂದು ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಸಿದ್ಧಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಹಾಜರಿದ್ದರು. ಚಿಕ್ಕಮಸ್ಕಲ್ ಮಠದ ಬಸವಲಿಂಗ ಸ್ವಾಮೀಜಿ,  ಹೊನ್ನಮ್ಮ ಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ  ಭಾಗವಹಿಸಿ ಆಶೀರ್ವಚನ ನೀಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಪರಮೇಶ್ವರಯ್ಯ ಇತರರು ಇದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್