ಬೆಂಗಳೂರು ನಗರ

ಒಂದೇ ಕುಟುಂಬದ ಮೂವರು ನೀರುಪಾಲು

ಕ.ಪ್ರ.ವಾರ್ತೆ ಕನಕಪುರ ಮಾ. 30
ತಾಲೂಕು ಮರಳವಾಡಿ ಹೋಬಳಿ ಕುಂಬಾರದೊಡ್ಡಿ ಗ್ರಾಮದಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂರುಮಂದಿ ಕೆರೆಯ ನೀರಿನಲ್ಲಿ ಮುಳುಗಿ  ಮೃತಪಟ್ಟ ಮನಕಲಕುವ ಘಟನೆ ನಡೆದಿದೆ.
ಕುಂಬಾರ ದೊಡ್ಡಿಯ ಗಿರಿಜಮ್ಮ (27)ತನ್ನ ಮಗ ಗಿರೀಶ್(9)ಮತ್ತು ನಾದಿನಿ ಮಗ ಅಭಿಷೇಕ್(11) ಜೊತೆ ಬಟ್ಟೆ ಒಗೆಯಲು ಸಮೀಪದ ಕೆರೆಗೆ ತೆರಳಿದ್ದಾಗ  ಘಟನೆ ಸಂಭವಿಸಿದೆ.   ಕೆರೆಯ ನೀರಿನಲ್ಲಿ ಆಟವಾಡುತ್ತಿದ್ದ ಮಕ್ಕಳು ಆಳವನ್ನು ಅರಿಯದೆ ಮುಳುಗಿಹೊಗಿದ್ದಾರೆ. ಘಟನೆಯಿಂದ ದಿಗ್ಭ್ರಾಂತಳಾದ ಗಿರಿಜಮ್ಮ ನೆರವಿಗಾಗಿ ಕೂಗಿದರೂ ಯಾರೂ ಜನರಿಲ್ಲದ ಕಾರಣ ತಾನೇ ನೀರಿಗಿಳಿದು ಮಕ್ಕಳನ್ನು ರಕ್ಷಿಸಲು ಮುಂದಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಹಾರೋಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ. ವೃತ್ತನಿರೀಕ್ಷಕ ನಾಗರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT