ಬೆಂಗಳೂರು ನಗರ

ಕಾನೂನು ಆಯೋಗಕ್ಕೆ ಸಿಬ್ಬಂದಿ, ಜಾಗದ ಕೊರತೆ

ಬೆಂಗಳೂರು: ಕಾನೂನು ಆಯೋಗಕ್ಕೆ ಸಿಬ್ಬಂದಿ ಮತ್ತು ಜಾಗದ ಕೊರತೆ ಇದ್ದು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಆಯೋಗದ ಅಧ್ಯಕ್ಷ ನ್ಯಾ.ಮೂ. ಎಸ್.ಆರ್.ನಾಯಕ್ ಅಳಲು ತೋಡಿಕೊಂಡಿದ್ದಾರೆ.
ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಯೋಗಕ್ಕೆ ಇಲ್ಲಿ ನೀಡಿರುವ ಕಚೇರಿಯಲ್ಲಿ ಸ್ಥಳಾವಕಾಶದ ಕೊರತೆ ಇದೆ. ಕನಿಷ್ಠ 10 ಸಾವಿರ ಚದರ ಅಡಿ ವಿಸ್ತೀರ್ಣ ಇರುವ ಕಚೇರಿ ಅಗತ್ಯವಿದೆ ಇದೆ ಎಂದರು.
ಆಯೋಗ ಪೂರ್ಣಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬರುವುದಕ್ಕೆ ಅಧ್ಯಕ್ಷರ ಜತೆಗೆ ಒಬ್ಬರು ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಗಳು ಇರಬೇಕು. ಅವರ ನೇಮಕವಾಗಿಲ್ಲ. ಆ ನಂತರವಷ್ಟೇ ಸರ್ಕಾರ ಆಯೋಗಕ್ಕೆ ಪರಿಶೀಲಿಸಲು ಶಿಫಾರಸು ಮಾಡಿರುವ ಲೋಕಾಯುಕ್ತ ಕಾಯ್ದೆ, ಮೌಢ್ಯ ಮತ್ತು ಅದ್ಧೂರಿ ವಿವಾಹ ನಿಯಂತ್ರಣ ಕಾಯ್ದೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಲು ಸಾಧ್ಯ ಎಂದು ಹೇಳಿದರು. ಆಯೋಗಕ್ಕೆ ಸರ್ಕಾರ ರು. 1.60 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜತೆಗೆ 30 ಸಿಬ್ಬಂದಿ ನೀಡಲಾಗಿದೆ. ಆದರೆ 15 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. ಸಂಶೋಧಕರು ಬೇರೆ ಕಡೆ ಕೆಲಸ ಮಾಡುವ ಪರಿಸ್ಥಿತಿ. ಇದನ್ನು ಹೊರತುಪಡಿಸಿ ಕೆಲ ತಜ್ಞರನ್ನು ಸದಸ್ಯರಾಗಿ ನೇಮಕ ಮಾಡಬೇಕಿದೆ. ಇದಕ್ಕೆಲ್ಲ ಜಾಗದ ಅಗತ್ಯವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ಬಿಗ್ ರಿಲೀಫ್, ದೆಹಲಿ ನ್ಯಾಯಾಲಯದಿಂದ ಖುಲಾಸೆ..!

'ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’: ಭಾರತ-ಅಫ್ಘಾನ್ ಗೆಳತನಕ್ಕೆ Pak ಅಸೂಯೆ, Quran ಉಲ್ಲೇಖಿಸಿ ವಿಷ ಕಾರಿದ ಸೇನಾ ವಕ್ತಾರ..!

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಮಹಾರಾಷ್ಟ್ರ: ಇಬ್ಬರಿಂದ ಪಾದ ತೊಳೆಸಿಕೊಂಡ ಕೈ ನಾಯಕ ನಾನಾ ಪಟೋಲೆ! Video ವೈರಲ್, ಇದೇ ಕಾಂಗ್ರೆಸ್ ಸಂಸ್ಕೃತಿ ಎಂದ ಬಿಜೆಪಿ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ 'Cooling period' ಜಾರಿ