ಬೆಂಗಳೂರು ನಗರ

ಪೊಲೀಸ್ ಮಹಿಳಾ ಸಿಬ್ಬಂದಿ ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಸಂಖ್ಯೆಯನ್ನು ಶೇ.20ರಿಂದ ಶೇ. 33ರವರೆಗೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
'ಲಿಂಗ ಸಂವೇದನಾಶೀಲತೆ ಯೋಜನೆ' ಬಗ್ಗೆ ಸಿಐಡಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಅಪರಾಧ ಪ್ರಕರಣಗಳಲ್ಲಿ ಬದಲಾಗುತ್ತಿರುವ ಶೈಲಿ ಗಮನದಲ್ಲಿಟ್ಟುಕೊಂಡು ಮಹಿಳಾ ಸಿಬ್ಬಂದಿ ಹೆಚ್ಚಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಮೂಲದ ಅಪರಾಧ ಪ್ರಕರಣಗಳ ಪರಿಣಾಮಕಾರಿ ತನಿಖೆ ಮಾಡುವುದು ಹಾಗೂ ಅಪರಾಧಗಳನ್ನು ತಡೆಯಲು ಸಾಧ್ಯ ಎಂದರು.
ಹುದ್ದೆ ಭರ್ತಿಗೆ ಕ್ರಮ: ಲಿಂಗ ಸಂವೇದನಶೀಲತೆ ಕುರಿತು ಮಾತನಾಡಿದ ಸಚಿವರು, ಪೊಲೀಸರು ಜನಸ್ನೇಹಿಯಾಗಿರಬೇಕು. ಅದರಲ್ಲೂ ಮಹಿಳೆಯರು ಹಾಗೂ ಮಕ್ಕಳ ಸಮಸ್ಯೆಗಳ ವಿಚಾರದಲ್ಲಿ ಸೂಕ್ಷ್ಮತೆಯಿಂದ ಕಾರ್ಯ ನಿರ್ವಹಿಸಬೇಕು. ಈಗಾಗಲೇ ಸುಮಾರು 25 ಸಾವಿರ ಪೊಲೀಸ್ ಸಿಬ್ಬಂದಿ ಸರ್ಕಾರೇತರ ಸಂಸ್ಥೆಗಳ ನೆರವಿನೊಂದಿಗೆ ಈ ಬಗ್ಗೆ ತರಬೇತಿ ಪಡೆದುಕೊಂಡಿದ್ದಾರೆ. ರಾಜ್ಯದ 6 ಕೋಟಿ ಜನಸಂಖ್ಯೆ ನಿಯಂತ್ರಣಕ್ಕೆ 1 ಲಕ್ಷ ಪೊಲೀಸರ ಅಗತ್ಯವಿದ್ದು ಖಾಲಿ ಇರುವ 27 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಐಡಿ ಡಿಐಜಿ ಸುಶಾಂತ ಮಹಾಪಾತ್ರ, ಈಗಾಗಲೇ ಹಾಸನ, ಕಡೂರು, ಬೆಂಗಳೂರಿನ ಥಣಿಸಂದ್ರ ಹಾಗೂ ಹುಬ್ಬಳ್ಳಿ ಧಾರವಾಡಗಳಲ್ಲಿ ತರಬೇತಿ ಕೇಂದ್ರಗಳಿವೆ. ಕೇಂದ್ರ ಸರ್ಕಾರದಿಂದ ಅನುದಾನ ಬಂದಿದ್ದು ಹೆಚ್ಚೆಚ್ಚು ಪೊಲೀಸರಿಗೆ ಮುಂದಿನ ದಿನಗಳಲ್ಲಿ ತರಬೇತಿ ಕೊಡಲಾಗುವುದು ಎಂದು ಜಾರ್ಜ್ ತಿಳಿಸಿದರು.
ಗೃಹ ಕಾರ್ಯದರ್ಶಿ ಎಸ್.ಆರ್.ಪಟ್ನಾಯಕ್, ಪೊಲೀಸ್ ಮಹಾನಿರ್ದೇಶಕ ಲಾಲ್ ರುಖಾಮ್ ಪಚಾವೋ, ಬಿಪಿನ್ ಗೋಪಾಲಕೃಷ್ಣ ಇದ್ದರು.


ಬುಡಕಟ್ಟು ಜನಾಂಗದ ಮಹಿಳೆಯರಿಗೂ ಅವಕಾಶ
ಬುಡಕಟ್ಟು ಜನಾಂಗದವರೂ ಕೂಡಾ ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳುವ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಬುಡಕಟ್ಟು ಜನತೆಗೆ ವಯೋವುತಿ ಸಡಿಲಿಕೆ ನೀಡುವ ಉದ್ದೇಶವಿದೆ ಎಂದು ಜಾರ್ಜ್ ತಿಳಿಸಿದರು. ಇದರಿಂದ ಎಲ್ಲಾ ಜನರಿಗೂ ಉದ್ಯೋಗಾವಕಾಶ ನೀಡುವುದರ ಜತೆಗೆ ಇಲಾಖೆಯಲ್ಲಿ ಅವರ ಪ್ರಾತಿನಿಧ್ಯವನ್ನು ಇರಿಸಲು ಅವಕಾಶ ನೀಡಿದಂತಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ಬಿಗ್ ರಿಲೀಫ್, ದೆಹಲಿ ನ್ಯಾಯಾಲಯದಿಂದ ಖುಲಾಸೆ..!

'ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’: ಭಾರತ-ಅಫ್ಘಾನ್ ಗೆಳತನಕ್ಕೆ Pak ಅಸೂಯೆ, Quran ಉಲ್ಲೇಖಿಸಿ ವಿಷ ಕಾರಿದ ಸೇನಾ ವಕ್ತಾರ..!

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಮಹಾರಾಷ್ಟ್ರ: ಇಬ್ಬರಿಂದ ಪಾದ ತೊಳೆಸಿಕೊಂಡ ಕೈ ನಾಯಕ ನಾನಾ ಪಟೋಲೆ! Video ವೈರಲ್, ಇದೇ ಕಾಂಗ್ರೆಸ್ ಸಂಸ್ಕೃತಿ ಎಂದ ಬಿಜೆಪಿ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ 'Cooling period' ಜಾರಿ