ಬೆಂಗಳೂರು ನಗರ

ಹೆಸರಘಟ್ಟ ಸಂರಕ್ಷಿತ ಪ್ರದೇಶ: ಮೊಯ್ಲಿ ಸಂತಸ

ಬೆಂಗಳೂರು: ಹೆಸರಘಟ್ಟ ಕೆರೆ ಒಳಗೊಂಡ 5 ಸಾವಿರ ಎಕರೆ ಪ್ರದೇಶವನ್ನು ಸಂರಕ್ಷಿತ ಪ್ರದೇಶವಾಗಿ ಪರಿಗಣಿಸಲು ನೀಡಿದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಗಣಿಸಿರುವುದಕ್ಕೆ ಸಂಸದ ಡಾ.ಎಂ. ವೀರಪ್ಪ ಮೊಯ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. 5 ಸಾವಿರ ಎಕರೆ ಪ್ರದೇಶವನ್ನು ಭವಿಷ್ಯದ ಜನಾಂಗದ ಒಳಿತಿಗೆ ಮೀಸಲಿಡಲು ಪ್ರಸ್ತಾವನೆಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಅರ್ಕಾವತಿ ಹಾಗೂ ಹೆಸರಘಟ್ಟ ಕೆರೆಯಿರುವ ಪ್ರದೇಶವನ್ನು ವಾಣಿಜ್ಯ ಚಟುವಟಿಕೆಗಳಿಗೆ ನೀಡಿದರೆ ಅಂತರ್ಜಲ ಮಟ್ಟ ಕುಸಿಯುತ್ತದೆ. ಪರಿಸರ ಸಂರಕ್ಷಣೆಗೆ ಕಾರಣವಾಗುವ ಈ ಪ್ರದೇಶವನ್ನು ಸಂರಕ್ಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಮೊಯ್ಲಿ ಸಲಹೆ ನೀಡಿದ್ದಾರೆ.  ಕಬ್ಬನ್ ಪಾರ್ಕ್ ಹಾಗೂ ಲಾಲ್‌ಬಾಗ್‌ನಂತೆ ಈ ಪ್ರದೇಶ ರಕ್ಷಣೆಯಾಗಬೇಕು. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಿಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತ್ಯಾಜ್ಯ ದಹನಕ್ಕೆ ವಿರೋಧ: ತ್ಯಾಜ್ಯವನ್ನು ದಹನ ಮಾಡುವ ಘಟಕ ಸ್ಥಾಪನೆಯನ್ನು ಬಿಬಿಎಂಪಿ ಕೈ ಬಿಡಬೇಕು ಎಂದು ವೀರಪ್ಪ ಮೊಯ್ಲಿ ಆಗ್ರಹಿಸಿದ್ದಾರೆ. ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳದ ಬಿಬಿಎಂಪಿ ಮುಚ್ಚಿಹೋದ ಮಾವಳ್ಳಿಪುರ ಘಟಕವನ್ನು ಮತ್ತೆ ತೆರೆಯಲು ಚಿಂತಿಸಿದೆ. ಈ ನಡುವೆ ತ್ಯಾಜ್ಯ ದಹನ ಮಾಡುವ ಘಟಕ ಸ್ಥಾಪಿಸಲು ಬಿಬಿಎಂಪಿ ಮುಂದಾಗಿದೆ. ಆದರೆ ದಹನದಿಂದ ನಗರದ ಜನರಿಗೆ ಕ್ಯಾನ್ಸರ್‌ನಂತಹ ಭೀಕರ ಖಾಯಿಲೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಹೊಸ ಯೋಜನೆ ಕೈ ಬಿಟ್ಟು ವಿದೇಶಗಳಲ್ಲಿರುವ ತ್ಯಾಜ್ಯ ನಿರ್ವಹಣೆಯ ಕ್ರಮವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಮಹಾರಾಷ್ಟ್ರದಲ್ಲಿ 'ಹೊಸ ಟ್ವಿಸ್ಟ್', ಬಿಜೆಪಿ ಹೊರಗಿಡಲು ಸೇನಾ- ಎನ್ ಸಿಪಿ ಮೈತ್ರಿ!

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಉತ್ತರಾಖಂಡ ಸಿಎಂ ಶಿಫಾರಸು

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

ಭದ್ರಾ ಮೇಲ್ದಂಡೆ ಯೋಜನೆ: ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್‌ ನಿರ್ಮಾಣ; ಎಲ್ಲಿದೆ ಗೊತ್ತಾ?

SCROLL FOR NEXT