ಬೆಂಗಳೂರು ನಗರ

ಹೆಸರಘಟ್ಟ ಸಂರಕ್ಷಿತ ಪ್ರದೇಶ: ಮೊಯ್ಲಿ ಸಂತಸ

ಬೆಂಗಳೂರು: ಹೆಸರಘಟ್ಟ ಕೆರೆ ಒಳಗೊಂಡ 5 ಸಾವಿರ ಎಕರೆ ಪ್ರದೇಶವನ್ನು ಸಂರಕ್ಷಿತ ಪ್ರದೇಶವಾಗಿ ಪರಿಗಣಿಸಲು ನೀಡಿದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಗಣಿಸಿರುವುದಕ್ಕೆ ಸಂಸದ ಡಾ.ಎಂ. ವೀರಪ್ಪ ಮೊಯ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. 5 ಸಾವಿರ ಎಕರೆ ಪ್ರದೇಶವನ್ನು ಭವಿಷ್ಯದ ಜನಾಂಗದ ಒಳಿತಿಗೆ ಮೀಸಲಿಡಲು ಪ್ರಸ್ತಾವನೆಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಅರ್ಕಾವತಿ ಹಾಗೂ ಹೆಸರಘಟ್ಟ ಕೆರೆಯಿರುವ ಪ್ರದೇಶವನ್ನು ವಾಣಿಜ್ಯ ಚಟುವಟಿಕೆಗಳಿಗೆ ನೀಡಿದರೆ ಅಂತರ್ಜಲ ಮಟ್ಟ ಕುಸಿಯುತ್ತದೆ. ಪರಿಸರ ಸಂರಕ್ಷಣೆಗೆ ಕಾರಣವಾಗುವ ಈ ಪ್ರದೇಶವನ್ನು ಸಂರಕ್ಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಮೊಯ್ಲಿ ಸಲಹೆ ನೀಡಿದ್ದಾರೆ.  ಕಬ್ಬನ್ ಪಾರ್ಕ್ ಹಾಗೂ ಲಾಲ್‌ಬಾಗ್‌ನಂತೆ ಈ ಪ್ರದೇಶ ರಕ್ಷಣೆಯಾಗಬೇಕು. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಿಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತ್ಯಾಜ್ಯ ದಹನಕ್ಕೆ ವಿರೋಧ: ತ್ಯಾಜ್ಯವನ್ನು ದಹನ ಮಾಡುವ ಘಟಕ ಸ್ಥಾಪನೆಯನ್ನು ಬಿಬಿಎಂಪಿ ಕೈ ಬಿಡಬೇಕು ಎಂದು ವೀರಪ್ಪ ಮೊಯ್ಲಿ ಆಗ್ರಹಿಸಿದ್ದಾರೆ. ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳದ ಬಿಬಿಎಂಪಿ ಮುಚ್ಚಿಹೋದ ಮಾವಳ್ಳಿಪುರ ಘಟಕವನ್ನು ಮತ್ತೆ ತೆರೆಯಲು ಚಿಂತಿಸಿದೆ. ಈ ನಡುವೆ ತ್ಯಾಜ್ಯ ದಹನ ಮಾಡುವ ಘಟಕ ಸ್ಥಾಪಿಸಲು ಬಿಬಿಎಂಪಿ ಮುಂದಾಗಿದೆ. ಆದರೆ ದಹನದಿಂದ ನಗರದ ಜನರಿಗೆ ಕ್ಯಾನ್ಸರ್‌ನಂತಹ ಭೀಕರ ಖಾಯಿಲೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಹೊಸ ಯೋಜನೆ ಕೈ ಬಿಟ್ಟು ವಿದೇಶಗಳಲ್ಲಿರುವ ತ್ಯಾಜ್ಯ ನಿರ್ವಹಣೆಯ ಕ್ರಮವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT