ಸಾಂದರ್ಭಿಕ ಚಿತ್ರ 
ಬೆಂಗಳೂರು ನಗರ

ರುಂಡ, ಕೈ ಕಾಲು ತುಂಡರಿಸಿದ ದುರುಳರು

ಬೆಂಗಳೂರು: ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ದುಷ್ಕರ್ಮಿಗಳು, ಕಲಾಸಿಪಾಳ್ಯದ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಮುಂಡವನ್ನು ಎಸೆದು ಪರಾರಿಯಾಗಿದ್ದಾರೆ.

ಸುಮಾರು 30 ವರ್ಷದ ವ್ಯಕ್ತಿಯ ತಲೆ ಮತ್ತು ಕೈ ಕಾಲುಗಳು ಇಲ್ಲದ ಎದೆ ಭಾಗ ಮಾತ್ರ ಪತ್ತೆಯಾಗಿದೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ನಾಯಿಗಳು ಮೂಟೆಯನ್ನು ಎಳೆದು ಹಾಕಿವೆ. ಇದನ್ನು ಗಮನಿಸಿದ ಸ್ಥಳೀಯರು ಮೂಟೆ ತೆರೆದು ನೋಡಿದಾಗ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೇರೆ ಕಡೆ ಕೊಲೆ ಮಾಡಿ ಗುರುತು ಸಿಗಬಾರದೆಂದು ತಲೆ ಮತ್ತು ಕೈ ಕಾಲು ಕತ್ತರಿಸಿ ಎದೆಭಾಗ ಮಾತ್ರ ಚೀಲದಲ್ಲಿ ಕಟ್ಟಿ ತಂದು ಬಿಸಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಇಲ್ಲಿನ ಆರ್.ಕೆ ಲಾಡ್ಜ್ ಸಮೀಪ ಅನುಮಾನಾಸ್ಪದವಾಗಿ ಇನ್ನೋವಾ ಕಾರು ನಿಂತಿತ್ತು. ಕಾರಿನಲ್ಲಿದ್ದವರೇ ಶವ ಎಸೆದು ಹೋಗಿರುವ ಶಂಕೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಕಳೆದ ಕೆಲ ದಿನಗಳಿಂದ ನಾಪತ್ತೆಯಾದವರ ವಿವರ ಕೊಡುವಂತೆ ಎಲ್ಲ ಠಾಣೆಗಳಿಗೆ ಸೂಚಿಸಲಾಗಿದೆ. ಅಲ್ಲದೆ ಶವ ಸಿಕ್ಕ ಸ್ಥಳದ ಸುತ್ತಮುತ್ತಲಿನ ಕಟ್ಟಡಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ'- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ: ಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ, ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ ಕರೆಯಲು ನಿರ್ಧಾರ

SCROLL FOR NEXT