ಬೆಂಗಳೂರು ನಗರ

ನೈತಿಕ ಪೊಲೀಸ್‌ಗಿರಿ ಮುಂದುವರಿದರೆ ಶ್ರೀರಾಮಸೇನೆ ನಿಷೇಧ: ಜಾರ್ಜ್

ನೈತಿಕ ಪೊಲೀಸ್‌ಗಿರಿ ಮುಂದುವರಿಸಿದರೆ ರಾಜ್ಯದಲ್ಲೂ ಶ್ರೀರಾಮ ಸೇನೆಯನ್ನು ನಿಷೇಧಿಸಲಾಗುವುದು...

ಬೆಂಗಳೂರು: ನೈತಿಕ ಪೊಲೀಸ್‌ಗಿರಿ ಮುಂದುವರಿಸಿದರೆ ರಾಜ್ಯದಲ್ಲೂ ಶ್ರೀರಾಮ ಸೇನೆಯನ್ನು ನಿಷೇಧಿಸಲಾಗುವುದು ಎಂದು ಗೃಹ ಸಚಿವ ಕೆ. ಜೆ ಜಾರ್ಜ್ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಶ್ರೀರಾಮಸೇನೆ ನೈತಿಕ ಪೊಲೀಸ್ ಗಿರಿ ಮಾಡುತ್ತಿದೆ. ಅದನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರೂ ಕೇಳಿಲ್ಲ. ಪರಿಸ್ಥಿತಿ ಹೀಗೆಯೇ ಮುಂದವರಿದರೆ ಸಂಘಟನೆ ನಿಷೇಧಿಸುವುದು ಅನಿವಾರ್ಯವಾಗುತ್ತದೆ ಎಂದರು.

ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಗೊಂದಲವಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ.

ಸುಪ್ರೀಂ ಕೋರ್ಟ್ ನಿರ್ದೇಶನ ಸೂತ್ರಗಳ ಆಧಾರದ ಮೇಲೆಯೇ ಬಿಡುಗಡೆ ಪ್ರಕ್ರಿಯೆ ನಡೆಯುತ್ತದೆ. ರಾಜ್ಯಪಾಲರ ಜತೆ ಸರ್ಕಾರ ಈ ವಿಚಾರದಲ್ಲಿ ಭಿನ್ನಮತ ಸೃಷ್ಟಿಸಿಕೊಂಡಿಲ್ಲ ಎಂದರು.

ರಾಜ್ಯ ವಿಭಜನೆ ಮಾಡುವಂತೆ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ ಮಾತ್ರಕ್ಕೆ ಕರ್ನಾಟಕ ಇಬ್ಭಾಗವಾಗುವುದಕ್ಕೆ ಸಾಧ್ಯವಿಲ್ಲ. ಅವರ ಹೇಳಿಕೆಗೆ ಯಾರು ಮಹತ್ವ ನೀಡಬೇಕಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT