ಬೆಂಗಳೂರು ನಗರ

ಶಿಕ್ಷಣ ಸಚಿವರಿಂದ ಶಿಕ್ಷಕರಿಗೆ ಪಾಠ

ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದ ಬಂದಿದ್ದ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಗುರುವಾರ ಕ್ಲಾಸ್ ತೆಗೆದುಕೊಂಡರು.

ಬೆಂಗಳೂರು: ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದ ಬಂದಿದ್ದ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಗುರುವಾರ ಕ್ಲಾಸ್ ತೆಗೆದುಕೊಂಡರು.

ಕಿಮ್ಮನೆ ರತ್ನಾಕರ್ ಅವರು ಇಂದು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಸಚಿವರನ್ನು ಭೇಟಿ ಮಾಡಿದ ಕೋಲಾರ ಶಿಕ್ಷಕರಾದ ಎಲ್. ಶ್ರೀನಿವಾಸ್, ನಂಜುಂಡೇಗೌಡ ಮತ್ತು ಕೆ.ಬಿ. ರೆಡ್ಡಪ್ಪ ಎಂಬುವರು ತಮ್ಮನ್ನು ವರ್ಗಾವಣೆ ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ಶಿಕ್ಷಕರ ಮನವಿ ಸ್ವೀಕರಿಸಿದ ಸಚಿವರು, ರಾಷ್ಟ್ರಪಿತ ಮಹಾತ್ಮ ಗಾಂಧಿ ಹುಟ್ಟಿದ ದಿನಾಂಕ ಮತ್ತು ಅವರ ಆದರ್ಶಗಳು, ವಿವೇಕಾನಂದರ ಆದರ್ಶಗಳೇನಾಗಿತ್ತು? ಹೀಗೆ ಹಲವು ಪ್ರಶ್ನೆಗಳನ್ನು ಶಿಕ್ಷಕರಿಗೆ ಕೇಳಿದರು. ಇದರಿಂದ ತಬ್ಬಿಬ್ಬಾದ ಶಿಕ್ಷಕರು, ಸಚಿವರು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ತಾವು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದ ಶಿಕ್ಷಕರಿಗೆ ಸಚಿವರು ಕ್ಲಾಸ್ ತೆಗೆದುಕೊಂಡರು.

ಮಹಾತ್ಮ ಗಾಂಧಿ ಮತ್ತು ವಿವೇಕನಂದರ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸದ ನೀವು ಮಕ್ಕಳಿಗೆ ಏನೂ ಪಾಠ ಮಾಡುತ್ತೀರಾ? ಮೊದಲು ನೀವು ಮಹಾತ್ಮರ ಬಗ್ಗೆ ತಿಳಿದುಕೊಂಡು ಬನ್ನಿ. ಆನಂತರ ನಿಮ್ಮ ಮನವಿಯನ್ನು ಪರಿಶೀಲಿಸುತ್ತೇನೆ ಎಂದು ಹೇಳಿ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel