ಬೆಂಗಳೂರು: ರೌಡಿಶೀಟರ್ ರವಿ ಎಂಬಾತನ ವಿರುದ್ಧ ನೀಡಲಾಗಿದ್ದ ದೂರನ್ನು ಸರಿಯಾಗಿ ದಾಖಲಿಸಿಕೊಳ್ಳದ ಆರೋಪದಲ್ಲಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಂಕರಾಚಾರಿ ಅವರನ್ನು ಅಮಾನತು ಮಾಡಲಾಗಿದೆ.
ರೌಡಿಶೀಟರ್ ರವಿ ಎಂಬಾತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಬಗ್ಗೆ ದೂರು ನೀಡಲಾಗಿತ್ತು. ದೂರಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿರಲಿಲ್ಲ, ಅಲ್ಲದೆ, ಠಾಣೆ ವ್ಯಾಪ್ತಿಯಲ್ಲಿ ಕೆಲಸ ಮಾಡದ ಆರೋಪವೂ ಇತ್ತು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ವಿಫಲಾಗಿದ್ದರು ಎನ್ನಲಾಗಿದೆ.
ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗೆ ಆದೇಶಿಸಲಾಗಿತ್ತು. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಶಂಕರಾಚಾರಿ ಅಮಾನತು ಆದೇಶ ನೀಡಿದ್ದಾರೆ.