ಸಾಂದರ್ಭಿಕ ಚಿತ್ರ 
ಬೆಂಗಳೂರು ನಗರ

ಬೆಂಗಳೂರಿಗರಿಗೆ ಲಾಕ್ ಡೌನ್ ಕಲಿಸಿದ ಪಾಠ

ಬೆಂಗಳೂರಿಗರು ಎಂದರೆ ಅಪಾರ್ಟ್ ಮೆಂಟ್ ಸಂಸ್ಕೃತಿಯನ್ನು ಮೈಗೂಡಿಸಿಕೊಂಡವರು, ಪಕ್ಕದ ಮನೆಯವರನ್ನು ಮಾತನಾಡಿಸದವರು ಎಂಬಿತ್ಯಾದಿ ಬಿರುದುಗಳಿವೆ. ಇವೆಲ್ಲವಕ್ಕೂ ವಿರುದ್ಧವಾದ ಸಂಗತಿಯೊಂದು ನೂತನ ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ. 

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಬೆಂಗಳೂರಿನಲ್ಲಿ ಸೃಷ್ಟಿಸಿದ ಅಲ್ಲಣವನ್ನು ಯಾರೂ ಮರೆತಿಲ್ಲ. ಲಾಕ್ ಡೌನ್ ನಿಯಮಾವಳಿಯನ್ನು ಪೊಲೀಸರು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೆ ತಂದರೂ ಸುದ್ದಿ ಮಾಧ್ಯಮಗಳಲ್ಲಿ, ದೃಶ್ಯಮಾಧ್ಯಮಗಳಲ್ಲಿ ಬೆಂಗಳೂರಿನದ್ದೇ ಹೈಲೈಟ್. ಕಿಕ್ಕಿರಿದು ತುಂಬಿರುವ ಬೆಂಗಳೂರು ಮಹಾನಗರದಲ್ಲಿ ಲಾಕ್ ಡೌನ್ ನಿಂದ ಉಂಟಾದ ಅಧ್ವಾನ ಅಷ್ಟಿಷ್ಟಲ್ಲ.

ಎಂದಿನಿಂದಲೂ ಬೆಂಗಳೂರಿಗರು ಎಂದರೆ ಅಪಾರ್ಟ್ ಮೆಂಟ್ ಸಂಸ್ಕೃತಿಯನ್ನು ಮೈಗೂಡಿಸಿಕೊಂಡವರು, ಪಕ್ಕದ ಮನೆಯವರನ್ನು ಮಾತನಾಡಿಸದವರು, ದ್ವೀಪಗಳಂತಿರುವ ಮೈಕ್ರೊ ಕುಟುಂಬದಂಥವರು ಎಂಬಿತ್ಯಾದಿ ಬಿರುದುಗಳಿವೆ. ಇವೆಲ್ಲವಕ್ಕೂ ವಿರುದ್ಧವಾದ ಸಂಗತಿಯೊಂದು ಮೈಗೇಟ್ ಎನ್ನುವ ಸಂಸ್ಥೆ ನಡೆಸಿದ ನೂತನ ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ. 

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಶೇ.98.79 ಪ್ರತಿಶತ ಬೆಂಗಳೂರಿಗರು ನೆರೆಹೊರೆಯವರೊಂದಿಗೆ ಚೆನ್ನಾಗಿ ಬೆರೆತಿದ್ದೇ ಅಲ್ಲದೆ ಪರಸ್ಪರ ಸ್ನೇಹ ಸಹಕಾರದಿಂದ ಇದ್ದಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ತಮ್ಮ ವಾಸ ಪ್ರದೇಶದ ಸುತ್ತಮುತ್ತಲಿನ ಕಿರಾಣಿ ಅಂಗಡಿಗಳು ಸೇರಿದಂತೆ ಚಿಕ್ಕಪುಟ್ಟ ವ್ಯಾಪಾರ ಮಳಿಗೆಗಳಲ್ಲೇ ವಸ್ತುಗಳನ್ನು ಕೊಳ್ಳುವ ಮೂಲಕ ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡಿದ್ದಾಗಿಯೂ ಸಮೀಕ್ಷೆ ಬಹಿರಂಗ ಪಡಿಸಿದೆ.

ಇದುವರೆಗೂ ತಾವಾಯಿತು ತಮ್ಮ ಕುಟುಂಬವಾಯ್ತು ಎಂಬಂತೆ ಇದ್ದವರು ಲಾಕ್ ಡೌನ್ ಸಮಯದಲ್ಲಿ ಇದೇ ಮೊದಲ ಬಾರಿಗೆ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದಲು ಲಾಕ್ ಡೌನ್ ಕಾರಣವಾಗಿರುವುದು ಕುತೂಹಲಕರ ಸಂಗತಿ. ಅಲ್ಲದೆ ಶೇ.80 ರಷ್ಟು ಬೆಂಗಳೂರಿಗರು ನೆರೆಹೊರೆಯವರ ಮೇಲೆ ಅವಲಂಬನೆ ಬೆಳೆಸಿಕೊಂಡಿದ್ದಾರೆ ಎಂಬ ಸಂಗತಿಯನ್ನೂ ಸಮೀಕ್ಷೆ ಹೊರಹಾಕಿದೆ. ದೇಶದ 12 ನಗರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT