ಬೆಳಗಾವಿ

ಗಡಿ ವಿವಾದ ಪ್ರಚೋದಿಸಿದರೆ ಕ್ರಿಮಿನಲ್ ಕೇಸ್

ಬೆಳಗಾವಿ: ಭಾಷೆ, ಗಡಿ ವಿವಾದದ ಹೆಸರಿನ ನೆಪದಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಕನ್ನಡಿಗರ ವಿರುದ್ಧ ಮರಾಠಿಗರನ್ನು ಎತ್ತಿಕಟ್ಟುತ್ತಿರುವ, ಮರಾಠಿ ಭಾಷಿಕರಿಗೆ ಪ್ರಚೋದನೆ ನೀಡುತ್ತಿರುವ ಎಂಇಎಸ್ ನಾಯಕರ ವಿರುದ್ಧ ಭಾರತೀಯ ದಂಡ ಸಂಹಿತೆ 153 ಎ ಕಲಂ ಅನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರ ಉದ್ದೇಶಿಸಿದೆ. ಇದೇ ಪ್ರಥಮ ಬಾರಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಲು ಸರ್ಕಾರ ಒಂದೆಡೆ ಚಿಂತನೆ ನಡೆಸುತ್ತಿದೆ. ಮತ್ತೊಂದೆಡೆ ಭಾಷಾ ಬಾಂಧವ್ಯಕ್ಕೆ ಅಡ್ಡಿ ಪಡಿಸಲು ಯತ್ನಿಸುತ್ತಿರುವ, ಶಾಂತಿ ಸುವ್ಯವಸ್ಥೆ ಅಡ್ಡಿ ಮಾಡುತ್ತಿರುವ ಎಂಇಎಸ್ ವಿರುದ್ಧ 153ಎ ಯಂತಹ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ, ಜಿಲ್ಲಾ ಆಡಳಿತ ಮುಂದಾಗಿದೆ ಎಂದು ಉತ್ತರ ವಲಯ ಐಜಿಪಿ ಭಾಸ್ಕರ್‌ರಾವ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ. ಯಳ್ಳೂರು ನಾಮಫಲಕ ವಿವಾದ ಸರ್ಕಾರಕ್ಕೆ ದೊಡ್ಡ ಮುಖಭಂಗವಾಗಿದ್ದು, ಪೊಲೀಸ್ ಇಲಾಖೆ, ಜಿಲ್ಲಾಡಳಿತದ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಜತೆಗೆ ಮಹಾರಾಷ್ಟ್ರ ರಾಜ್ಯ ಎಂಬ ನಾಮಫಲಕವನ್ನು ಮರಾಠಿ ಪ್ರಾಬಲ್ಯದ ಎಲ್ಲ ಗ್ರಾಮಗಳಲ್ಲಿ ಹಾಕಬೇಕೆಂಬ ಎಂಇಎಸ್ ಕರೆ, ಇದಕ್ಕೆ ರಾಜ್ಯ ಹೈಕೋರ್ಟ್ ತರಾಟೆ ತೆಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ಮೂಲಕ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.   ಇದೇ ವೇಳೆ ಬೆಳಗಾವಿ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಓಡಾಡುವ ವಾಹನಗಳ ಮೇಲೂ ಮರಾಠಿಗರು ಜೈ ಮಹಾರಾಷ್ಟ್ರ ಎಂಬ ಘೋಷಣೆ ಬರೆಸಿದ್ದಾರೆ. ಹಿಂಡಲಗಾದ ಬಸ್ ನಿಲ್ದಾಣದ ಶೆಲ್ಟರ್ ಮುಂದೆ ಕಿಡಿಗೇಡಿಗಳು ಮಹಾರಾಷ್ಟ್ರ ರಾಜ್ಯ ಬ್ಯಾನರ್ ಕಟ್ಟಿದ್ದರು. ಕನ್ನಡಿಗರು ಗಮನ ಸೆಳೆದ ಹಿನ್ನೆಲೆಯಲ್ಲಿ ಪೊಲೀಸರು ಈ ಬ್ಯಾನರ್‌ನ್ನು ತೆರವುಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!