ಬೆಳಗಾವಿ

ರಾಯಬಾಗ ತಹಸೀಲ್ದಾರ ಶಿವಾನಂದ ಅಮಾನತು

ಬೆಳಗಾವಿ: ಟ್ಯಾಂಕರ್ ನೀರು ಪೂರೈಕೆಯಲ್ಲಿ ಗೋಲಮಾಲ್ ಪ್ರಕರಣದ ಹಿನ್ನೆಲೆಯಲ್ಲಿ ರಾಯಬಾಗ ತಹಸೀಲ್ದಾರ ಶಿವಾನಂದ ಸಾಗರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಉಪಕಾರ್ಯದರ್ಶಿ ಕೆ.ಎಸ್. ಸರೋಜಮ್ಮ ಆದೇಶ ಹೊರಡಿಸಿದ್ದಾರೆ. ಜೂನ್ 9 ರಂದು'ಕನ್ನಡಪ್ರಭ' ರಾಯಬಾಗ ಅಕ್ರಮಗಳಿಗೆ ಸ್ವರ್ಗ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿ ತಹಸೀಲ್ದಾರ ಕಚೇರಿಯಲ್ಲಿ ನಡೆದ ಅವ್ಯವಹಾರಗಳ ಮೇಲೆ ಬೆಳಕು ಚೆಲ್ಲಿತ್ತು. ಇಲ್ಲಿ ತಹಸೀಲ್ದಾರ ಕಚೇರಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿತ್ತು. ನಕಲಿ ಚಲನ್ ಸೃಷ್ಟಿಸಿ ಕೋಟ್ಯಂತರ ರು. ವಂಚನೆ, ಟ್ಯಾಂಕರ್ ನೀರು ಪೂರೈಕೆಯಲ್ಲಿ ಲಕ್ಷಾಂತರ ರು. ಅವ್ಯವಹಾರ, ಕಂದಾಯ ಭೂಮಿ ಖಾಸಗಿ ವ್ಯಕ್ತಿಗೆ ಪರಭಾರೆ ಹೀಗೆ ಅವರ ವಿರುದ್ಧದ ಹಗರಣಗಳು ಒಂದೊಂದಾಗಿ ಬೆಳಕಿಗೆ ಬಂದಿದ್ದವು.
ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಯರಾಂ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು. ಇದರನ್ವಯ ಸರ್ಕಾರ, ತಹಸೀಲ್ದಾರನ್ನು ವಿಚಾರಣೆಗೆ ಕಾಯ್ದಿರಿಸಿ, ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!