ಬೆಳಗಾವಿ

ಶಾಸಕ ಡಿ.ಬಿ.ಇ ಸೇರಿ 14 ಮಂದಿ ವಿರುದ್ಧ ಕ್ರಮಕ್ಕೆ ಆದೇಶ

ಬೆಳಗಾವಿ: ಶಾಸಕ ಹಾಗೂ ಎಂ.ಕೆ. ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಡಿ.ಬಿ. ಇನಾಮದಾರ ಸೇರಿ14 ಜನರ ವಿರುದ್ಧ ಅವ್ಯವಹಾರದ ಆರೋಪ ಸಾಬೀತಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್ ಪೀಠ ಸೂಚಿಸಿದೆ.
ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಸದಸ್ಯ ಮಹಾಂತೇಶ ಪಾಟೀಲ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡದ ಹೈಕೋರ್ಟ್ ಪೀಠವು, ಅವ್ಯವಹಾರ ಸಾಬೀತಾಗಿದ್ದು, ಮುಂದಿನ 2 ತಿಂಗಳ ಒಳಗಾಗಿ ಈ ಎಲ್ಲ ಸದಸ್ಯರ ವಿರುದ್ಧ ಕರ್ನಾಟಕ ಸಹಕಾರಿ ಸಂಘಗಳ ಕಾಯ್ದೆ 1959ರ ಕಲಂ 64 ಮತ್ತು 68ರ ಪ್ರಕಾರ ಕ್ರಮ ಕೈಗೊಳ್ಳಬೇಕು ಹಾಗೂ ರು. 24 ಕೋಟಿಯನ್ನು ಮರಳಿ ವಸೂಲು ಮಾಡಿಕೊಳ್ಳಬೇಕೆಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯಕ್ಕೆ ಸೂಚಿಸಿದೆ.
ಬೇಕು ಸ್ಪೀಕರ್ ಅನುಮತಿ: ಶಾಸಕ ಇನಾಂದಾರ ವಿರುದ್ಧ ಕ್ರಮಕ್ಕೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸ್ವೀಕರ್ ಅನುಮತಿ ಕೇಳಬೇಕಾಗುತ್ತದೆ. ಕ್ರಮ ಕೈಗೊಳ್ಳದಿದ್ದರೆ 'ಹೈ' ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ನ್ಯಾಯವಾದಿ ಶಿವರಾಜ್ ಮುಧೋಳ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!