ಬಳ್ಳಾರಿ

ಜಮೀನಿಗೆ ಕರಡಿ, ಹಂದಿ ದಾಳಿ: ರೈತ ಕಂಗಾಲು

ಕೂಡ್ಲಿಗಿ: ತಾಲೂಕಿನ ಗುಡೇಕೋಟೆ ಹೋಬಳಿಯ ಹತ್ತಾರು ಹಳ್ಳಿಗಳಲ್ಲಿ ಆರಣ್ಯ ಪ್ರದೇಶದ ಹತ್ತಿರದಲ್ಲಿರುವ ನೂರಾರು ಎಕರೆ ಜಮೀನುಗಳಿಗೆ ಕರಡಿ, ಹಂದಿಗಳು ನುಗ್ಗಿ ಇತ್ತೀಚೆಗೆ ಬಿತ್ತನೆ ಮಾಡಿದ್ದ ಶೇಂಗಾ ಬೀಜಗಳನ್ನು ತಿಂದು ನಾಶ ಮಾಡಿರುವುದರಿಂದ ಜಮೀನಿನ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ
ರೈತರು ಸಾಲಸೂಲ ಮಾಡಿ ತಮ್ಮ ಜಮೀನಿನಲ್ಲಿ ಸಾವಿರಾರು ರು. ಖರ್ಚು ಮಾಡಿ ಬಿತ್ತನೆ ಮಾಡಿದ್ದಾರೆ. ಆದರೆ, ಕಾಡು ಪ್ರಾಣಿಗಳು ಆಹಾರಕ್ಕಾಗಿ ರೈತರ ಹೊಲಗಳಿಗೆ ನುಗ್ಗಿ ಬಿತ್ತನೆ ಬೀಜಗಳನ್ನು ಸಾಲು ಹಿಡಿದು ತಿಂದು ನಾಶ ಮಾಡಿರುವುದಲ್ಲದೆ ಇತರೇ ಬೆಳೆಗಳನ್ನು ನಾಶ ಮಾಡಿವೆ.
ಭೀಮಸಮುದ್ರ ಗ್ರಾಮದ ಬಸವರಾಜಪ್ಪ ಮಾತನಾಡಿ, ನಮ್ಮ ಜಮೀನಿನಲ್ಲಿ ಸುಮಾರು ಒಂದು ಕ್ವಿಂಟಲ್ ಶೇಂಗಾ ಬಿತ್ತನೆ ಮಾಡಿದ್ದೆ. ಆದರೆ ಕರಡಿ, ಹಂದಿಗಳು ಜಮೀನಿಗೆ ಬಂದು ತಿಂದು ಸಂಪೂರ್ಣ ನಾಶ ಮಾಡಿವೆ ಮತ್ತು ರಾತ್ರಿ ಸಮಯದಲ್ಲಿ ಜಮೀನಿಗೆ ಕಾವಲು ಕಾಯಲು ಹೋದ್ರೆ ಪ್ರಾಣಿಗಳು ನಮ್ಮ ಮೇಲೆ ದಾಳಿ ಮಾಡ್ತವೆ. ಹೀಗಾಗಿ ನಾವು ಕೆಲ ದಿನಗಳಿಂದ ಜಮೀನಿಗೆ ಹೋಗುವುದು ಬಿಟ್ಟಿದ್ದೇವೆ ಎಂದರು. ತಾಲೂಕಿನ ಭೀಮಸಮುದ್ರ, ಕಡೇಕೊಳ್ಳ, ಕರಡಿಹಳ್ಳಿ, ಹುಲಿಕುಂಟೆ ಗ್ರಾಮಗಳು ಸೇರಿದಂತೆ ಹತ್ತಾರು ಗ್ರಾಮಗಳ ರೈತರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಈಗಾಗಲೇ ಗುಡೇಕೋಟೆಯಲ್ಲಿ ಕರಡಿಧಾಮ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರ ಬೇಗನೆ ಕರಡಿಧಾಮ ನಿರ್ಮಿಸಿದರೆ ರೈತರ ನಷ್ಟ ತಪ್ಪಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

SCROLL FOR NEXT