ಬಳ್ಳಾರಿ

ಕ್ರೀಡೆಯಿಂದ ದೈಹಿಕ, ಮಾನಸಿಕ ಸದೃಢ: ಮುಕ್ತಿಯಾರ್ ಪಾಷಾ

ಹೊಸಪೇಟೆ: ಯುವಶಕ್ತಿಗೆ ಕ್ರೀಡೆಗಳು ಬಹಳ ಮುಖ್ಯವಾಗಿವೆ. ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕವಾಗಿ ಸಧೃಢವಾಗುತ್ತದೆ ಎಂದು ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಕ್ತಿಯಾರ್ ಪಾಷಾ ಹೇಳಿದರು.
ತಾಲೂಕಿನ ಕಮಲಾಪುರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹೊಸಪೇಟೆ ಕ್ಷೇತ್ರ ಶಿಕ್ಷಣ ಕಾರ್ಯಾಲಯ ಹಾಗೂ ಕಮಲಾಪುರ ಕ್ರೀಡಾಭಿಮಾನಿಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ 42ನೇ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಎ.ಎನ್. ಸುಧಾಕರ ಮಾತನಾಡಿ, ಕ್ರೀಡೆ ಮಕ್ಕಳ ಅವಿಭಾಜ್ಯ ಅಂಗ ಎಂದರು.
ಶಿಕ್ಷಕರ ರಾಜ್ಯ ಪರಿಷತ್ ಸದಸ್ಯ ವೆಂಕಟೇಶ್ ರೆಡ್ಡಿ, ಹಂಪಿ ಡಿವೈಎಸ್‌ಪಿ ಬಿ.ಎನ್. ಲಾವಣ್ಯ, ಪಪಂ ಮುಖ್ಯಾಧಿಕಾರಿ ಉಮೇಶ್ ಕೆ. ಹಿರೇಮಠ, ಉಪಾಧ್ಯಕ್ಷೆ ಗಂಗಮ್ಮ, ಸ್ಥಳೀಯ ಮುಖಂಡರಾದ ಗೋಪಾಲ್, ಬಿ.ಆರ್. ಮಳಲಿ, ಅಬ್ದುಲ್ ಜಂತೆ, ಹನುಮಂತ, ಮರ್ದಾನ್, ಶಂಕರ, ಶಿವರಾಮ್, ನಾರಾಯಣಪ್ಪ, ಹುಲುಗಪ್ಪ, ಲೋಕಭಿರಾಮ್, ವಲಯ ಮಟ್ಟದ ಕ್ರೀಡಾಕೂಟ ಸಮಿತಿ ಕೋಶಾಧ್ಯಕ್ಷ ಅನ್ವರ್, ಕಾರ್ಯದರ್ಶಿ ಶಿವುಕುಮಾರ್ ಇದ್ದರು. ಶಿವುಕುಮಾರ್ ಸ್ವಾಗತಿಸಿದರು. ಹೊನ್ನಪ್ಪ ವಂದಿಸಿದರು. ಎಲ್. ಹಾಲ್ಯಾ ನಾಯ್ಕ ನಿರೂಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT