ಬಳ್ಳಾರಿ

ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಹೊಸಪೇಟೆ: ತಾಲೂಕಿನ ಕಮಲಾಪುರ ಹೋಬಳಿಯ ಅಂಗವಿಕಲರಿಗೆ ಮಾಸಾಶನ ನೀಡಬೇಕು ಹಾಗೂ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕಿನ ಗ್ರಾಮೀಣ ವಿಕಲಚೇತನರ ಸಂಘದ ಮುಖಂಡರು ಒತ್ತಾಯಿಸಿ ತಾಲೂಕು ಕಚೇರಿ ಮುಂದೆ ಬುಧವಾರ ಅನಿರ್ದಿಷ್ಟ ಕಾಲದ ಉಪವಾಸ ಸತ್ಯಾಗ್ರಹ ನಡೆಸಿದರು.
ಕಮಲಾಪುರ ಹೋಬಳಿಯಲ್ಲಿ 400ಕ್ಕೂ ಹೆಚ್ಚು ಅಂಗವಿಕಲರಿದ್ದು, ಅವರಿಗೆ ಮಾಸಾಶನ ಮಂಜೂರು ಮಾಡಬೇಕು. ಮೋಟಾರ್ ಚಾಲಿತ ವಾಹನಗಳು ಗ್ರಾಪಂ, ಪಪಂಗಳಲ್ಲಿ ಶೇ. 3ರಷ್ಟು ಅನುದಾನ ಅಂಗವಿಕಲರ ಅಭಿವೃದ್ಧಿಗೆ ಬಳಿಸುತ್ತಿಲ್ಲ. ಈ ಅನುದಾನ ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ. ಸರ್ಕಾರ ಮಧ್ಯೆ ಪ್ರವೇಶಿಸಿ ಅಂಗವಿಕಲರ ಹಕ್ಕುಗಳನ್ನು ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದರು.
ಸಂಘದ ಮುಖಂಡರಾದ ಜಿ. ಮುಕ್ಕಣ್ಣ, ಕೆ.ಜಿ. ವೆಂಕಟೇಶ್, ಹುಲುಗಪ್ಪ, ಎನ್. ವೆಂಕಟೇಶ್, ಶಿವಗಂಗಮ್ಮ, ಶರಣಮ್ಮ, ಜಿ. ಹುಲುಗಪ್ಪ, ರಫೀಕ್, ರಾಜಾಸಾಬ್, ಹುಸೇನಾಬಿ, ನಾರಾಯಣಪ್ಪ, ಅಂಜಿನಿ, ಅರುಣ ಕುಮಾರ್, ಎನ್. ವೆಂಕಟೇಶ್, ಎಚ್. ಶೇಷು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT