ಬಿಜಾಪುರ

ಜ್ಞಾನಪೀಠಿಗರಿಗೆ ಪಿತ್ತ ನೆತ್ತಿಗೇರಿದೆ: ಡಾ. ಹಂಪನಾ

ಜಮಖಂಡಿ: ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಕವಿ ಎನಿಸಿಕೊಂಡವರು, ಜ್ಞಾನಪೀಠ ಪ್ರಶಸ್ತಿ ಪಡೆದವರು ಪಿತ್ತ ನೆತ್ತಿಗೇರಿದವರಂತೆ ವರ್ತಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ವಿದ್ವಾಂಸ ಡಾ.ಹಂ.ಪ. ನಾಗರಾಜಯ್ಯ ಟೀಕಿಸಿದ್ದಾರೆ. ರತ್ನತ್ರಯ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆ ಆಶ್ರಯದಲ್ಲಿ ಶನಿವಾರ ಬಸವ ಭವನದ ಸಭಾಭವನದಲ್ಲಿ 2 ದಿನಗಳ ಆದಿಕವಿ ಪಂಪ- ಕವಿ, ಕಾವ್ಯ ಕುರಿತ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಾಹಿತಿಗಳು ಪ್ರಶಸ್ತಿಗಾಗಿ ಬಾಗಿಲು ಕಾಯುವುದನ್ನು ಬಿಟ್ಟು ಉತ್ತಮ ಕೃತಿ ಹೊರ ತರುವ ಕೆಲಸ ಮಾಡಲಿ. ಸಾಹಿತಿಗಳಾದ ನಾವು ಜವಾಬ್ದಾರಿಯಿಂದ ವರ್ತಿಸಬೇಕು. ನೈತಿಕತೆ, ಆದರ್ಶಗಳನ್ನು ಆಧಾರವಾಗಿಟ್ಟುಕೊಂಡು ಕೃತಿ ಹೊರತರಬೇಕು. ಪಂಪನಿಗೆ ಸಾಕಷ್ಟು ಬಿರುದು- ಬಾವಲಿಗಳು ಬಂದರೂ ಅವನಲ್ಲಿ ಅಹಂ ಇರಲಿಲ್ಲ. ಕನ್ನಡಕ್ಕೆ ಪಂಪ ಶ್ರೇಷ್ಠ ಕವಿ ಎಂದ ಅವರು, ನಮ್ಮ ದೇಶ, ಭಾಷೆ, ನೆಲ, ಜಲದ ಬಗ್ಗೆ ಕನ್ನಡಿಗರಲ್ಲಿ ಸ್ವಾಭಿಮಾನ ಬೆಳೆಸಿ, ಕನ್ನಡಾಭಿಮಾನದ ಕಿಚ್ಚು ಹಚ್ಚಿದವರಲ್ಲಿ ಪಂಪ ಅಗ್ರಗಣ್ಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

SCROLL FOR NEXT