ಬಿಜಾಪುರ

ವಿಶ್ವಕರ್ಮ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹೋರಾಟ ಅಗತ್ಯ

ಬಿಜಾಪುರ: ವಿಶ್ವಕರ್ಮ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ದೊರೆಯದಿದ್ದರೆ ಉಳಿಗಾಲವಿಲ್ಲ ಎಂದು ಅಖಿಲ ಕರ್ನಾಟಕ ರಾಜ್ಯ ವಿಶ್ವ ಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು. ಬೆಳಗಾವಿಯಲ್ಲಿ ಸೆ.17ರಂದು ನಡೆಯಲಿರುವ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 35 ಲಕ್ಷಕ್ಕೂ ಹೆಚ್ಚು ವಿಶ್ವಕರ್ಮರ ಜನಸಂಖ್ಯೆ ಇದೆ. ಆದರೆ, ರಾಜಕೀಯ ಕ್ಷೇತ್ರದಲ್ಲಿ ಈ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮಾಜದ ಸಂಘಟನೆ ಅತ್ಯಗತ್ಯ. ರಾಜಕೀಯ ಪ್ರಾತಿನಿಧ್ಯ ಪಡೆಯಲು ತಮ್ಮ ಸಮಾಜದ ಜನಾಂಗ ನಿರಂತರ ಹೋರಾಟ ಮಾಡಬೇಕು ಎಂದು ಕರೆ ನೀಡಿದರು. ಸೆ.17ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 6ನೇ ವಿಶ್ವ ಕರ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಐದು ಜನ ಸಾಧಕರಿಗೆ ವಿಶ್ವಕರ್ಮ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಮೂವರು ವಿಶ್ವಕರ್ಮ ಸಮಾಜ ಬಾಂಧವರಿಗೆ ಹಾಗೂ ಇತರ ಸಮಾಜದ ಇಬ್ಬರು ಸಾಧಕರಿಗೆ ವಿಶ್ವಕರ್ಮ ಪ್ರಶಸ್ತಿ ನೀಡಲಾಗುವುದು. ಒಂದು ಪ್ರಶಸ್ತಿ 75,000 ಹಾಗೂ ಫಲಕ ಹೊಂದಿರುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

SCROLL FOR NEXT