ಬಿಜಾಪುರ

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬಿಜಾಪುರ: ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಮೇ 1ರಂದು ನಡೆಯಬೇಕಿದ್ದ ಬಾಲ್ಯ ವಿವಾಹ ತಡೆಯುವಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರ ತಂಡ ಯಶಸ್ವಿಯಾಗಿದೆ.
ಗ್ರಾಮದ ಕುಂಬಾರ ಓಣಿಯ ಶಶಿಕಲಾ (ಹೆಸರು ಬದಲಿಸಿದೆ) ಎಂಬುವಳ ಬಾಲ್ಯ ವಿವಾಹ ನಡೆಯುವ ಕುರಿತು ಏ. 27ರಂದು ಮಕ್ಕಳ ಸಹಾಯವಾಣಿಗೆ ಬಂದ ದೂರವಾಣಿ ಕರೆಯನ್ನು ಆಧರಿಸಿ ಏ. 28ರಂದು ಉಕ್ಕಲಿ ಗ್ರಾಮಕ್ಕೆ ತೆರಳಿದ ಮಕ್ಕಳ ಸಹಾಯವಾಣಿ ತಂಡ ಬಾಲಕಿಯ ಕುಟುಂಬವನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ ಬಾಲ್ಯವಿವಾಹ ನಿಷೇಧ ಕಾನೂನು, ಬಾಲ್ಯವಿವಾಹ ಮಾಡಿದವರಿಗೆ ವಿಧಿಸುವ ಶಿಕ್ಷೆ, ಬಾಲ್ಯವಿವಾಹದಿಂದ ಬಾಲಕಿಯ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ತಿಳಿವಳಿಕೆ ನೀಡಲಾಯಿತು.
ಬಾಲ್ಯ ವಿವಾಹ ನಡೆಸದಂತೆ ಸಮುದಾಯದ ಮುಖಂಡರ ಮನವೊಲಿಸುವ ಮೂಲಕ ಮೇ 1ರಂದು ನಿಗದಿಯಾಗಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಕ್ಕಳ ಸಹಾಯವಾಣಿ ತಂಡ ಯಶಸ್ವಿಯಾಗಿದೆ.  ಇದೇ ಸಂದರ್ಭದಲ್ಲಿ ಬಾಲಕಿಯ ಪೋಷಕರಿಂದ ಬಾಲ್ಯ ವಿವಾಹ ನಡೆಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ.  ಅದೇ ದಿನ ಮಧ್ಯಾಹ್ನ ಓಣಿಯ ಹಿರಿಯರ ಸಭೆ ನಡೆಸಿದ ಚೈಲ್ಡ್ ಲೈನ್-1098 ಸಂಯೋಜಕಿ ಸುನಂದಾ ತೋಳಬಂದಿ ಬಾಲ್ಯವಿವಾಹ ಮಾಡಿದ ಮಕ್ಕಳ ಪಾಲಕರಿಗೆ ಹಾಗೂ ಪಾಲ್ಗೊಂಡ ಹಿರಿಯರಿಗೆ ರು. 1 ಲಕ್ಷ ದಂಡ ಹಾಗೂ ಎರಡು ವರ್ಷಗಳ ಕಾರಾಗೃಹ ವಾಸ ವಿಧಿಸಲಾಗುವುದು ಎಂದು  ತಿಳಿಸಿದರು.
ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಯಿದ್ದಲ್ಲಿ ಉಚಿತ ದೂರವಾಣಿ 1098 ಅಥವಾ 08352222973 ಇಲ್ಲಿಗೆ ಕರೆ ಮಾಡಿ ದೂರು ದಾಖಲಿಸಿ ಸಮಸ್ಯೆಗೆ ಪರಿಹಾರ, ಪುನರ್ವಸತಿ ಪಡೆಯಬಹುದೆಂದು ತಿಳಿಸಿದರು.   
ಈ ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕಿ ಸುನಂದಾ ತೋಳಬಂದಿ, ತಂಡದ ಸದಸ್ಯರಾದ ಕಲ್ಮೇಶ ಬಗಲಿ, ಗೀತಾ ತುಪ್ಪದ, ರೇಣುಕಾ ಜುಮನಾಳ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಮಲಾ ವಾಗ್ಮೋರೆ, ಮೇಲ್ವಿಚಾರಕಿ ಶಾಲಿನಿ ಗುದಿಗೆನ್ನವರ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

SCROLL FOR NEXT