ಬಿಜಾಪುರ

ರಾಜ್ಯ ಸರ್ಕಾರದ ನಡೆಗೆ ಎಬಿವಿಪಿ ಖಂಡನೆ

ಬಿಜಾಪುರ: ನಕ್ಸಲ್ ನಿಗ್ರಹ ಪಡೆಯ ನೈತಿಕ ಸ್ಥೈರ್ಯ ಕುಸಿತಕ್ಕೆ ಕಾರಣವಾದ ರಾಜ್ಯ ಸರ್ಕಾರದ ಬೇಜವಾಬ್ದಾರಿ ನಡೆಯನ್ನು ವಿರೋಧಿಸಿ ಮಂಗಳವಾರ ರಾಜ್ಯದ ಎಲ್ಲೆಡೆಯಂತೆ ಎಬಿವಿಪಿ ವಿದ್ಯಾರ್ಥಿಗಳು ಬಿಜಾಪುರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಎಬಿವಿಪಿ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಜಮಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶೃಂಗೇರಿಯ ತನಿಕೋಡು ಚೆಕ್‌ಪೋಸ್ಟ್ ಬಳಿ ಏ. 19ರಂದು ನಕ್ಸಲ್ ನಿಗ್ರಹ ಪಡೆಯವರು ನಕ್ಸಲರೆಂದು ತಿಳಿದು ದನಗಳ್ಳರ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ಎಬಿವಿಪಿ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ.
ನಕ್ಸಲ್ ನಿಗ್ರಹ ಪಡೆಯ ಯೋಧ ನವೀನ್ ನಾಯ್ಕ ಅವರು ರಾಷ್ಟ್ರಪತಿ ಪದಕ ವಿಜೇತರು, ಹಲವಾರು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಹಾಗೂ ದಕ್ಷತೆಗೆ ಹೆಸರಾಗಿದ್ದರೂ ಸರ್ಕಾರದ ಈ ನಿರ್ಧಾರದಿಂದಾಗಿ ಪೊಲೀಸರನ್ನು ಅವಮಾನ ಮಾಡಿದೆ ಎಂದು ರಾಜ್ಯ ಕಾರ್ಯದರ್ಶಿ ಟಿ.ಎಸ್. ಸುನೀಲ ಪ್ರಸಾದ ಹೇಳಿದರು.
ಭಾಗ್ಯಾ ಮೂಲಿಮನಿ, ಪರಿಮಳಾ ಕಾಂಬಳೆ, ಆನಂದ ಚವ್ಹಾಣ, ಚೇತನ ಮಠ, ವೀರೇಶ ಹಿರೇಮಠ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ಸ್ಲಂ ಬೋರ್ಡ್ ಅಡಿ 42,000 ಮನೆಗಳ ನಿರ್ಮಿಸಲಾಗುತ್ತಿದ್ದು, ಮೂಲಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದಿಂದ ಅನುದಾನ: ಸಿಎಂ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

SCROLL FOR NEXT